ರಾಜ್ಯ

ಭೀಕರ ಅಪಘಾತ ಲಾರಿಗೆ ಕಾರು ಡಿಕ್ಕಿ – 3 ತಿಂಗಳ ಮಗು ಸೇರಿ ಮೂವರು ಸಾವು

ಚಿತ್ರದುರ್ಗ:  ಚಿತ್ರದುರ್ಗ,ವಿಜಯಪುರ ಗೊಲ್ಲರಹಟ್ಟಿ ಗ್ರಾಮದ ಬಳಿ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂರು ತಿಂಗಳ ಮಗು ಸೇರಿ ಬೆಂಗಳೂರಿನ ಮೂವರು ದಾರುಣ ಸಾವಿಗೀಡಾಗಿರುವ ಘಟನೆ ನಡೆದಿದೆ.

ಮೂರು ತಿಂಗಳ ಮಗು ಫಾತಿಮಾ, ತಾಯಿ ತಬ್ಸೂಮ್ ಹಾಗೂ ಸಂಬಂಧಿ ಜಾಕೀರ್ ಅಹ್ಮದ್ ಮೃತ ದುರ್ದೈವಿಗಳು. ಇವರು ಬೆಂಗಳೂರಿನ ಹೆಚ್‌ಎಸ್‌ಆರ್ ಬಡಾವಣೆ ನಿವಾಸಿಗಳು ಎಂದು ತಿಳಿದು ಬಂದಿದೆ.
ನಯಾಜ್, ಇಮ್ರಾನ್ ಖಾನ್, ತಬ್ರೀಜ್ ಅಹಮ್ಮದ್, ಸಬಾ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಇವರೆಲ್ಲ ಗೋವಾದಿಂದ ಬೆಂಗಳೂರಿಗೆ ಹಿಂದಿರುಗುವಾಗ ಭೀಕರ ಅಪಘಾತ ಸಂಭವಿಸಿದೆ. ಕಾರು ಚಾಲಕನ ನಿಯಂತ್ರಣ ತಪ್ಪಿ ಮುಂದೆ ಸಾಗುತ್ತಿದ್ದ ಲಾರಿಗೆ ಅಪ್ಪಳಿಸಿದೆ. ಸ್ಥಳದಲ್ಲೇ ಮೂವರು ದುರ್ಮಣಕ್ಕೀಡಾದರು. ಗಂಭೀರ ಗಾಯಗೊಂಡಿರುವ ಉಳಿದವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!