ಸಮಗ್ರ ಸುದ್ದಿ
ಪುಣಚ : ಆಟೋರಿಕ್ಷಾ ಪಲ್ಟಿ, ಚಾಲಕ ಜಗನ್ನಾಥ ಪೈಸಾರಿ ಸಾವು
ವಿಟ್ಲ: ಚಲಿಸುತ್ತಿದ್ದ ಆಟೋರಿಕ್ಷಾಕ್ಕೆ ಅಡ್ಡಲಾಗಿ ಬಂದ ದನವನ್ನು ತಪ್ಪಿಸುವ ವೇಳೆ ನಿಯಂತ್ರಣ ತಪ್ಪಿ ಆಟೋರಿಕ್ಷಾದಿಂದ ರಸ್ತೆಗೆ ಎಸೆಯಲ್ಪಟ್ಟ ಚಾಲಕ ಗಂಭೀರವಾಗಿ ಗಾಯಗೊಂಡು ಮೃತಪಟ್ಟ ಘಟನೆ ಪುಣಚದಲ್ಲಿ ಮಂಗಳವಾರ ನಡೆದಿದೆ.
ಮಂಗಳವಾರ ಮಧ್ಯಾಹ್ನ ಊಟ ಮುಗಿಸಿದ ಬಳಿಕ ಪುಣಚದ ಅಟೋರಿಕ್ಷಾ ಪಾರ್ಕಿಂಗ್ ಸ್ಥಳಕ್ಕೆ ಬರುತ್ತಿದ್ದ ಸಂದರ್ಭದಲ್ಲಿ ಮಣಿಲ ಎಂಬಲ್ಲಿ ದುರ್ಘಟನೆ ಸಂಭವಿಸಿದ್ದು, ಆಟೋರಿಕ್ಷಾ ರಸ್ತೆಗೆ ಪಲ್ಟಿಯಾಗಿ ಬಿದ್ದ ಕಾರಣ, ತಲೆಗೆ ಗಂಭೀರ ಗಾಯವಾಗಿದ್ದು, ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಆ ವೇಳೆಗಾಗಲೇ ಅವರು ಮೃತಪಟ್ಟಿದ್ದರೆನ್ನಲಾಗಿದೆ.
ತುಳು ನಾಟಕ ರಂಗದಲ್ಲಿ ಹಾಸ್ಯ ಅಭಿನಯದ ಮೂಲಕ ಮಿಂಚಿದ್ದಅವರು, ಕಳೆದ ಮೂವತ್ತು ವರ್ಷಗಳಿಂದ ಆಟೋರಿಕ್ಷಾ ಚಾಲಕರಾಗಿ’ರಿಕ್ಷಾ ಜಗ್ಗಣ್ಣ’ಎಂದೇ ಗುರುತಿಸಲ್ಪಟ್ಟಿದ್ದರು.ಮೃತರ ಮನೆಗೆ ಹಲವಾರು ಮಂದಿ ಭೇಟಿ ನೀಡಿ ಸಂತಾಪ ಸೂಚಿಸಿದರು.ಮೃತರು ಪತ್ನಿ, ಪುತ್ರಿ, ಪುತ್ರ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.