ಪ್ರಿಯತಮೆ ಮೂಲಕ ಸಾಫ್ಟ್ ವೇರ್ ಇಂಜಿನಿಯರ್ ಕಿಡ್ನಾಪ್!!
ಚಿಕ್ಕಬಳ್ಳಾಪುರ: ಸಾಫ್ಟ್ ವೇರ್ ಇಂಜಿನಿಯರ್ನನ್ನು ಕಿಡ್ನಾಪ್ ಮಾಡಿ ಸಿನಿಮೀಯ ರೀತಿಯಲ್ಲಿ ದರೋಡೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.
ಟೆಕ್ಕಿಯನ್ನು ಕಿಡ್ನಾಪ್ ಮಾಡಿದ ಬಳಿಕ ಮೂರು ದಿನಗಳ ರೆಸಾರ್ಟ್ವೊಂದರಲ್ಲಿ ಕೂಡಿ ಹಾಕಿದ್ದ ದುಷ್ಕರ್ಮಿಗಳು, ಆತನ ಮೇಲೆ ಹಲ್ಲೆ ಮಾಡಿದ ಎರಡು ಲ್ಯಾಪ್ ಟಾಪ್, ಮೂರು ಮೊಬೈಲ್, 12 ಗ್ರಾಂ ಬಂಗಾರದ ಚೈನ್ ಸೇರಿದಂತೆ 21 ಲಕ್ಷ ರೂಪಾಯಿ ಹಣ ವರ್ಗಾಯಿಸಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.
ಬೆಂಗಳೂರಿನ ಖಾಸಗಿ ಸಾಪ್ಟವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ 32 ವರ್ಷದ ವಿಜಯಸಿಂಗ್ ಎಂಬಾತನನ್ನು ಆತನ ಪ್ರಿಯತಮೆಯ ನೆರವಿನೊಂದಿಗೆ ದೇವನಹಳ್ಳಿಗೆ ಕರೆಯಿಸಿಕೊಂಡಿದ್ದ ದುಷ್ಕರ್ಮಿಗಳು ಆತನನ್ನು ಅಲ್ಲಿಂದ ಕಿಡ್ನಾಪ್ ಮಾಡಿದ್ದರು. ಆ ಬಳಿಕ ಚಿಕ್ಕಬಳ್ಳಾಪುರ ತಾಲೂಕಿನ ನಂದಿಗಿರಿಧಾಮದ ಬಳಿ ಇರುವ ಕ್ಯೂ.ವಿ.ಸಿ ವಿಲ್ಲಾ ರೆಸಾರ್ಟ್ಗೆ ಕರೆತಂದಿದ್ದ ಆರೋಪಿಗಳು ಆತನನ್ನು ವಿಲ್ಲಾದ ರೂಮ್ ನಂಬರ್ 36ರಲ್ಲಿ ಕೂಡಿ ಹಾಕಿ ಮೂರು ದಿನಗಳ ಕಾಲ ಮೇಲೆ ಹಲ್ಲೆ ಮಾಡಿದ್ದಾರೆ.
ಪ್ರಕರಣದ ಸಂಬಂಧ ಪೊಲೀಸರು ಐಪಿಸಿ ಸೆಕ್ಷನ್ 506, 341, 504, 143, 149, 384, 323, 324 ಅಡಿ ಆರು ಮಂದಿಯ ವಿರುದ್ಧ ಎಫ್ಐಆರ್ ದಾಖಲು ಮಾಡಿದ್ದಾರೆ. ನಂದಿಗಿರಿಧಾಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ಆರೋಪಿಗಳ ಬಂಧನಕ್ಕಾಗಿ ಕಾರ್ಯಾಚರಣೆ ನಡೆಸಿದ್ದಾರೆ. ಇತ್ತ ತೀವ್ರವಾಗಿ ಹಲ್ಲೆಗೊಳಗಾಗಿದ್ದ ವಿಜಯಸಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು, ಚೇತರಿಸಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.