ಸಾಜ : ಸೆ.6ರಂದು ಸಾಜ ಶ್ರೀ ದುರ್ಗಾ- ವೆಂಕಟ್ರಮಣ ಭಜನಾ ಮಂದಿರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿ ಸಂಭ್ರಮ.
ಸಾಜ : ವಿಶ್ವ ಹಿಂದೂ ಪರಿಷದ್ ಸಾಜ ಇದರ ನೇತೃತ್ವದಲ್ಲಿ ಶ್ರೀ ದುರ್ಗಾ-ವೆಂಕಟ್ರಮಣ ಭಜನಾ ಮಂದಿರ (ರಿ.) ಸಾಜ, ಬಲ್ನಾಡು ಇದರ ಸಹಯೋಗದೊಂದಿಗೆ ಶ್ರೀ ಕೃಷ್ಣ ಜನ್ಮಾಷ್ಠಮಿ ಸಮಿತಿ ಸಾಜ ಇವರ ಸಂಯುಕ್ತ ಆಶ್ರಯದಲ್ಲಿ 16ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಠಮಿ ಆಚರಣೆಯು ವಿವಿಧ ಆಟೋಟ ಸ್ಪರ್ಧೆಗಳೊಂದಿಗೆ ಸೆ.6ರಂದು ಸಾಜ ಶ್ರೀ ದುರ್ಗಾ-ವೆಂಕಟ್ರಮಣ ಭಜನಾ ಮಂದಿರದ ವಠಾರದಲ್ಲಿ ನಡೆಯಲಿದೆ.
ಬೆಳಗ್ಗೆ ಸ್ಥಳೀಯ ಪುಟಾಣಿ ಮಕ್ಕಳು ದೀಪ ಪ್ರಜ್ವಲನೆ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದಾರೆ, ಬಳಿಕ ಪುರುಷರಿಗೆ, ಮಹಿಳೆಯರಿಗೆ, ಮತ್ತು ಮಕ್ಕಳಿಗೆ ವಿವಿಧ ರೀತಿಯ ಆಟೋಟ ಸ್ಪರ್ಧೆಗಳು, 5 ವರ್ಷದ ಒಳಗಿನ ಮಕ್ಕಳಿಗೆ ಮುದ್ದು ಕೃಷ್ಣ ಸ್ಪರ್ಧೆ ನಡೆಯಲಿದೆ, ಮತ್ತು ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಲಿದೆ.
ಸಮಾರೋಪ ಸಮಾರಂಭ ಮತ್ತು ಆಟೋಟ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಣೆ.
ವಿವಿಧ ಆಟೋಟ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಣೆ ಮತ್ತು ಸಮಾರೋಪ ಸಮಾರಂಭ ಸಂಜೆ ಗಂಟೆ 5ಕ್ಕೆ ನಡೆಯಲಿದೆ, ಈ ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಇದರ ಅಧ್ಯಕ್ಷರಾದ ಕೃಷ್ಣಪ್ಪ ಕೆ, ಕೂಟೇಲು ವಹಿಸಲಿದ್ದಾರೆ, ಗೌರವ ಉಪಸ್ಥಿತಿ ಪ್ರಗತಿಪರ ಕೃಷಿಕರಾದ ನಾರಾಯಣ ರೈ ಸಾಜ, ಧಾರ್ಮಿಕ ಉಪನ್ಯಾಸಕರಾಗಿ ವಿವೇಕಾನಂದ ಕಾಲೇಜು, ಪುತ್ತೂರು ಇಲ್ಲಿನ ಇತಿಹಾಸ ಉಪನ್ಯಾಸಕರಾದ ಡಾ| ಪ್ರಮೋದ್ ಎಂ. ಜಿ. ಭಾಗವಹಿಸಲಿದ್ದಾರೆ, ಹಾಗೂ ಮುಖ್ಯ ಅತಿಥಿಗಳಾಗಿ ರವಿಚಂದ್ರ ಸಾಜ, ಉಪಾಧ್ಯಕ್ಷರು, ಬಲ್ನಾಡು ಗ್ರಾಮ ಪಂಚಾಯತ್ , ಚಂದಪ್ಪ ಪೂಜಾರಿ ಕಾಡ್ಲ ಅಧ್ಯಕ್ಷರು ಹಾಲು ಉತ್ಪಾದಕರ ಸಹಕಾರಿ ಸಂಘ ಬೆಳಿಯೂರುಕಟ್ಟೆ , ಜನಾರ್ಧನ ಪೂಜಾರಿ ಕಾಡ್ಲ ಅಧ್ಯಕ್ಷರು ಶ್ರೀದುರ್ಗಾ-ವೆಂಕಟ್ರಮಣ ಭಜನಾ ಮಂದಿರ(ರಿ) ಸಾಜ, ಬಲ್ನಾಡು ಮತ್ತು ಬಲ್ನಾಡು ಗ್ರಾಮ ಪಂಚಾಯತ್ ಸದಸ್ಯರಾದ ವಸಂತಿ ಹರೀಶ್ ಪೂಜಾರಿ ಮತ್ತು ಶೋಭಾ ಯಂ, ಭಾಗವಹಿಸಲಿದ್ದಾರೆ, ಈ ಎಲ್ಲಾ ಕಾರ್ಯಕ್ರಮದಲ್ಲಿ ಹಿಂದೂ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಕಾರ್ಯಕ್ರಮವನ್ನು ಯಶಸ್ವಿ ಗೊಳಿಸುವಂತೆ ಸಂಘಟಕರು ತಿಳಿಸಿದ್ದಾರೆ.