ತಾಲೂಕು ಸುದ್ದಿ
ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪರಿಚಾರಕ ಸಂಪತ್ ಪೂಜಾರಿ ನಿಧನ ..!!
ಪುತ್ತೂರು : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ
ಜಾತ್ರೋತ್ಸವ ಸಂದರ್ಭ ದಂಡ್ ಶಿಲಾಲ್ ಪರಿಚಾರಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಕೆರೆಮೂಲೆ ನಿವಾಸಿ ಸಂಪತ್ ಪೂಜಾರಿ (31) ನಿಧನರಾದರು.
ಅಲ್ಪಕಾಲ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಪುತ್ತೂರು ಆಸ್ಪತ್ರೆಗೆ ದಾಖಲಾಗಿ, ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ನಿಧನರಾದರು.
ಸಂಪತ್ ರವರು ಜೆಸಿಬಿ ಹಾಗೂ ಹಿಟಾಚಿ, ಟಿಪ್ಪರ್ ಹೊಂದಿದ್ದು, ಕೆಲಸ ನಿರ್ವಹಿಸುತ್ತಿದ್ದರು.
ಮೃತರು ತಂದೆ, ತಾಯಿ ಸಹೋದರರನ್ನು ಅಗಲಿದ್ದಾರೆ.