ರಾಜ್ಯ
ಮಂಗಳೂರು :ಏ.4: ದ. ಕ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ನಾಮಪತ್ರ ಸಲ್ಲಿಕೆ.
ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಏ.4 ರಂದು ನಾಮಪತ್ರ ಸಲ್ಲಿಸಲಿದ್ದಾರೆ.
ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಪ್ರಾರಂಭವಾಗಿದ್ದು, ಈವರೆಗೆ ಯಾವ ಪಕ್ಷದಿಂದಲೂ ನಾಮಪತ್ರ ಸಲ್ಲಿಕೆಯಾಗಿಲ್ಲ.
ನಾಮಪತ್ರಗಳನ್ನು ಸಲ್ಲಿಸಲು ಗುರುವಾರ (ಏಪ್ರಿಲ್ 4) ಕೊನೆಯ ದಿನವಾಗಿದೆ.
ಶುಕ್ರವಾರ (ಏಪ್ರಿಲ್ 5) ರಂದು ನಾಮಪತ್ರಗಳನ್ನು ಪರಿಶೀಲಿಸಲಾಗುವುದು.
ನಾಮಪತ್ರಗಳನ್ನು ಹಿಂಪಡೆಯಲು ಸೋಮವಾರ (ಏಪ್ರಿಲ್ 8) ಕೊನೆಯ ದಿನವಾಗಿದೆ.
ದಕ್ಷಿಣ ಕರ್ನಾಟಕದ ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 26 ರಂದು ಮತದಾನ ನಡೆಯಲಿದೆ.
ಉತ್ತರ ಕರ್ನಾಟಕದ ಲೋಕಸಭಾ ಕ್ಷೇತ್ರಗಳಿಗೆ ಮೇ 7 ರಂದು ಮತದಾನ ನಡೆಯಲಿದೆ
ಮತಗಳ ಎಣಿಕೆ ಮತ್ತು ಫಲಿತಾಂಶ ಜೂನ್ 4 ರಂದು ಪ್ರಕಟವಾಗಲಿದೆ.