“ಸಾವರ್ಕರ್ ಗೋಮಾಂಸ ತಿಂತಿದ್ದರು” ಎಂದ ದಿನೇಶ್ ಗುಂಡೂರಾವ್ ಹೇಳಿಕೆಗೆ ಬಿಜೆಪಿ ಟ್ವೀಟ್
ಬೆಂಗಳೂರು: ಸಾವರ್ಕರ್ (Veer Savrkar) ಗೋಹತ್ಯೆಯ ವಿರೋಧಿಯಲ್ಲ. ಅವರು ಚಿತ್ಪಾವನ ಬ್ರಾಹ್ಮಣರಾಗಿದ್ದರಾದರೂ ಮಾಂಸಾಹಾರಿಯಾಗಿದ್ದರು, ಅವರು ಗೋಮಾಂಸ (Beef Eater) ತಿನ್ನುತ್ತಿದ್ದರು ಎಂದು ಹೇಳಿಕೆ ನೀಡಿದ್ದ ಸಚಿವ ದಿನೇಶ್ ಗುಂಡೂರಾವ್ (Dinesh Gundurao) ವಿರುದ್ಧ ಬಿಜೆಪಿ ಕೆಂಡಕಾರಿದೆ.
ಈ ಬಗ್ಗೆ ರಾಜ್ಯ ಬಿಜೆಪಿ ದಿನೇಶ್ ಗುಂಡೂರಾವ್ ವಿರುದ್ಧ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದು, ‘ದಿನೇಶ್ ಗುಂಡೂರಾವ್ ಅವರೇ, ಬ್ರಾಹ್ಮಣ ಸಮಾಜದ ವೀರ ಸಾವರ್ಕರ್ ಅವರು ಗೋಮಾಂಸ ಸೇವಿಸುತ್ತಿದ್ದರು ಎಂದು ನಿಮಗೆ ಬ್ರಾಹ್ಮಣ ಸಮಾಜದ ನಿಮ್ಮ ತಂದೆ ಗುಂಡೂರಾವ್ ಹೇಳಿದ್ದರೋ ಅಥವಾ ಮುಸ್ಲಿಂ ಸಮಾಜದ ನಿಮ್ಮ ಪತ್ನಿ ತಬಸ್ಸುಮ್ ಅವರು ಹೇಳಿದ್ದರೋ’ ಎಂದು ಟ್ವೀಟ್ ಮೂಲಕ ವ್ಯಂಗ್ಯವಾಡಿದೆ.
ಬಿಜೆಪಿ ಟ್ವೀಟ್
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ನೀಡಿರುವ ವಿವಾದಾತ್ಮಕ ಹೇಳಿಕೆ ರಾಷ್ಟ್ರಮಟ್ಟದಲ್ಲಿ ಸಂಚಲನ ಮೂಡಿಸಿದ್ದು, ಸಾವರ್ಕರ್ ಬಗ್ಗೆ ನೀಡಿರುವ ಹೇಳಿಕೆ ವೈರಲ್ ಆಗುತ್ತಿದ್ದಂತೆ ಬಿಜೆಪಿ ನಾಯಕರು ದಿನೇಶ್ ಗುಂಡೂರಾವ್ ವಿರುದ್ಧ ಕಿಡಿಕಾರಿದ್ದಾರೆ.