ಮಾಹಿತಿ

ಅರುಣ್ ಕುಮಾರ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ: ಎಫ್ ಐ ಆರ್ ದಾಖಲು.

Click below to Share News

ಪುತ್ತೂರು: ಹಿಂದೂ ಮುಖಂಡ, ಪುತ್ತಿಲ ಪರಿವಾರ ಸಂಸ್ಥಾಪಕ ಅರುಣ್ ಕುಮಾ‌ರ್ ಪುತ್ತಿಲ ವಿರುದ್ಧ ಪುತ್ತೂರು ಮಹಿಳಾ ಠಾಣೆಯಲ್ಲಿ ಮಹಿಳೆಯೊಬ್ಬರು ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.


ಬೆಂಗಳೂರಿನ ಪೈ ವಿಸ್ಟಾ ಹೋಟೆಲ್ ಗೆ, ಆತ್ಮಹತ್ಯೆ ಮಾಡುವುದಾಗಿ ಬೆದರಿಸಿ 2023ರ ಜೂನ್ ತಿಂಗಳಲ್ಲಿ ಮಹಿಳೆಯೊಬ್ಬರನ್ನು ಕರೆಸಿಕೊಂಡು ಇಚ್ಚೆಗೆ ವಿರುದ್ಧವಾಗಿ ಲೈಂಗಿಕ ದೌರ್ಜನ್ಯ ನಡೆಸಿದ್ದೂ ಅಲ್ಲದೆ, ನಂಬಿಕೆ ದ್ರೋಹ, ಮಾನಹಾನಿ, ಬ್ಲಾಕ್ ಮೇಲಿಂಗ್, ಶಾರೀರಿಕ ಮತ್ತು ಮಾನಸಿಕ ಪೀಡನೆ, ಕೊಲೆ ಬೆದರಿಕೆಯನ್ನು ಹಾಕುತ್ತಿರುವ ಬಗ್ಗೆ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


2023ರ ಜೂನ್‌ ತಿಂಗಳಲ್ಲಿ ಬೆಂಗಳೂರಿನ ಹೋಟೆಲ್ ಒಂದಕ್ಕೆ ಕರೆಸಿಕೊಂಡು ಲೈಂಗಿಕ ದೌರ್ಜನ್ಯ ನಡೆಸಿದ್ದರು. ಆ ಬಳಿಕ ಬ್ಲಾಕ್ ಮೇಲ್ ಮಾಡಿಕೊಂಡು ಅವರಿರುವ ಪ್ರದೇಶಕ್ಕೆ ಕರೆಸಿಕೊಳ್ಳುತ್ತಿದ್ದರು. ಅಬಲೆಯಾದ ತನ್ನ ಪುತ್ರಿಗೆ ಜೀವನ ಪೂರ್ತಿ ಯಾವುದೇ ಕೊರತೆಯಾಗದಂತೆ ನೋಡಿಕೊಳ್ಳುವುದಾಗಿ ನಂಬಿಸಿ ನನ್ನನ್ನು ದೈಹಿಕ ಹಾಗೂ ಮಾನಸಿಕವಾಗಿ ಬಳಸಿಕೊಳ್ಳುತ್ತಿದ್ದರು. ಅವರೊಂದಿಗೆ ಇದ್ದ ಕ್ಷಣಗಳ ಛಾಯಾ ಚಿತ್ರ, ಸೆಲ್ಫಿ, ಆಡಿಯೋ, ವಿಡಿಯೋ ಗಳು ಇದೆಯೆಂದು ಹೇಳಿಕೊಂಡು ಬೆದರಿಸಿ ಅವರ ಕೆಲಸಗಳನ್ನು ಮಾಡಿಸಿಕೊಳ್ಳುತ್ತಿದ್ದರು.

2024ರ ಲೋಕಸಭಾ ಚುನಾವಣೆಯ ಬಳಿಕ ಮಾತುಕತೆ ಕಡಿಮೆ ಮಾಡಿದ್ದಾರೆ. ಭಯಗೊಂಡು ನಾನು ಪುತ್ತೂರಿಗೆ ವಾಸ ಬದಲಾವಣೆ ಮಾಡಿಕೊಂಡು ಬಾಡಿಗೆ ಮನೆಯಲ್ಲಿ ವಾಸವಿದ್ದೇನೆ. ಉದ್ಯೋಗ ಹಾಗೂ ವರಮಾನವಿಲ್ಲದೆ ಬಾಡಿಗೆ ಮನೆಯಲ್ಲಿದ್ದುಕೊಂಡು ಕಷ್ಟಪಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸಂತ್ರಸ್ತೆ ಮಹಿಳೆ ದೂರಿನಲ್ಲಿ ಹೇಳಿದ್ದಾರೆ.

ಅರುಣ್ ಕುಮಾರ್ ಪುತ್ತಿಲ ವಿರುದ್ಧ ಪುತ್ತೂರಿನ ಮಹಿಳಾ ಠಾಣೆಯಲ್ಲಿ ಐಪಿಸಿ 417, 354A, 506 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.


Click below to Share News

Related Articles

Leave a Reply

Your email address will not be published. Required fields are marked *

Back to top button
error: Content is protected !!