ಸಮಗ್ರ ಸುದ್ದಿ

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತ, ಕೂರ್ನಡ್ಕದ ಯುವತಿ ದಾರುಣ ಮೃತ್ಯು, ಇಬ್ಬರಿಗೆ ಗಾಯ

ಬಂಟ್ವಾಳ: ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬಳು ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ ಬಂಟ್ವಾಳ ವ್ಯಾಪ್ತಿಯ ತುಂಬೆ ಎಂಬಲ್ಲಿ ಬೆಳಿಗ್ಗೆ ಸಂಭವಿಸಿದೆ.

ಮೃತಪಟ್ಟು ಯುವತಿಯನ್ನು ಪುತ್ತೂರಿನ ಕೂರ್ನಡ್ಕ ನಿವಾಸಿ ಅಬ್ದುಲ್ ಮಜೀದ್ ಹಾಗೂ ಶಮೀಮಾ ದಂಪತಿ ಪುತ್ರಿ ಹನಾ (19) ಎಂದು ಗುರುತಿಸಲಾಗಿದೆ.ಇವರು ಅಲೋಶಿಯಸ್ ನಲ್ಲಿ ಬಿಬಿಎಂ ವಿದ್ಯಾರ್ಥಿನಿ.

ಪುತ್ತೂರಿನಿಂದ ಮಂಗಳೂರು ಕಡೆ ಪ್ರಯಾಣಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ತುಂಬೆ ಸಮೀಪ ಹೆದ್ದಾರಿಯಲ್ಲಿ ಅಪಘಾತಗೊಂಡಿದ್ದು, ಕಾರಿನಲ್ಲಿದ್ದ ಚಾಲಕ ಹಾಗೂ ಮೃತ ಯುವತಿಯ ತಾಯಿಗೆ ಗಾಯಗಳಾಗಿವೆ ಎನ್ನಲಾಗಿದೆ. ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!