ಸಮಗ್ರ ಸುದ್ದಿ
ಚಿಕ್ಕಮಗಳೂರು : ಟ್ರಕ್ಕಿಂಗ್ ಬಂದಿದ್ದ ಪ್ರವಾಸಿಗ ಹೃದಯಘಾತದಿಂದ ಸಾವು
![](https://veekshakanews.com/wp-content/uploads/2023/07/image_editor_output_image-2045772255-1688180619606-780x469.jpg)
ಚಿಕ್ಕಮಗಳೂರು : ಟ್ರಕ್ಕಿಂಗ್ ಬಂದಿದ್ದ ಪ್ರವಾಸಿಗ ಹೃದಯಘಾತದಿಂದ ಸಾವನ್ನಪ್ಪಿದ ಘಟನೆ ನಡೆದಿದೆ. ರಕ್ಷಿತ್ (27) ಮೃತಪಟ್ಟ ಯುವಕ ಮೈಸೂರು ಮೂಲದ 7 ಯುವಕರ ತಂಡ ಟ್ರಕ್ಕಿಂಗ್ ಗೆ ಆಗಮಿಸಿದ್ದರು. ಕುದುರೆಮುಖದಿಂದ-ನೇತ್ರಾವತಿ ಪೀಕ್ ಸ್ಪಾಟ್ ಗೆ ತೆರಳಿದ್ದ ವೇಳೆ ಮಾರ್ಗ ಮಧ್ಯದಲ್ಲಿ ರಕ್ಷಿತ್ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
![](https://veekshakanews.com/wp-content/uploads/2023/07/image_editor_output_image-643270907-1688180464387.jpg)
ಚಿಕ್ಕಮಗಳೂರು-ದಕ್ಷಿಣಕನ್ನಡ ಜಿಲ್ಲೆಯ ನೇತ್ರಾವತಿ ಪೀಕ್ ಸ್ಪಾಟ್ ನಿಂದ ಮೃತದೇಹವನ್ನ ಪೊಲೀಸರು ಕಳಸಕ್ಕೆ ತಂದಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.