ಸಮಗ್ರ ಸುದ್ದಿ

ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಜನಾರ್ದನ ರೆಡ್ಡಿ

Click below to Share News

ಬೆಳ್ತಂಗಡಿ : ಸಿಬಿಐ ವಿಶೇಷ ಕೋರ್ಟ್‌ ಪ್ರಕರಣ ಸಂಬಂಧದ ಆದೇಶದ ಬೆನ್ನಲ್ಲೆ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸ್ಥಾಪಕ ಜನಾರ್ದನ ರೆಡ್ಡಿ ಹಾಗೂ ಕುಟುಂಬ ಜೂನ್ 13 ರಂದು ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನ ಪಡೆದಿದ್ದಾರೆ.

ಜನಾರ್ದನ ರೆಡ್ಡಿ, ಪತ್ನಿ ಅರುಣಾ ಲಕ್ಷ್ಮೀ, ಮಗಳು ಬ್ರಹ್ಮಿಣಿ, ಅಳಿಯ ರಾಜೀವ್ ಹಾಗೂ ಅವರ ಕುಟುಂಬದವರು ಜೂನ್ 12 ರಾತ್ರಿ ಧರ್ಮಸ್ಥಳ ಸನ್ನಿಧಿಯ ವಸತಿ ಗೃಹಕ್ಕೆ ಆಗಮಿಸಿದ್ದರು. ಇಂದು ಬೆಳಗ್ಗೆ ಮಂಜುನಾಥ ಸ್ವಾಮಿಯ ದರ್ಶನ ಪಡೆದು ಸರ್ವ ಸೇವೆ ಪೂಜೆ ಸಲ್ಲಿಸಿದರು.

ನಿನ್ನೆ ಸಿಬಿಐ ವಿಶೇಷ ಕೋರ್ಟ್ ಜನಾರ್ಧನ ರೆಡ್ಡಿ ಅವರ ಆಸ್ತಿ ಮಾರಾಟ ಮಾಡದಂತೆ ಅದೇಶ ಮಾಡಿದೆ

ಬಳಿಕ ಮಾಧ್ಯಮ ಜೊತೆ ಮಾತನಾಡಿದ ಅವರು ಕಳೆದ 6 ವರ್ಷಗಳಿಂದ ಮಂಜುನಾಥನ ದರ್ಶನ ಮಾಡಲು ಸಾಧ್ಯವಾಗಿಲ್ಲ. ಇಂದು ದರ್ಶನ ಪಡೆದಿದ್ದೇನೆ. ನಿನ್ನೆ ಸಿಬಿಐ ವಿಶೇಷ ಕೋರ್ಟ್‌ ಪ್ರಕರಣ ಸಂಬಂಧ ಆಸ್ತಿ ಪಾಸ್ತಿ ಮಾರಾಟ ಮಾಡದಂತೆ ಕೋರ್ಟ್ ಆದೇಶ ಮಾಡಿದೆ. ಧರ್ಮಸ್ಥಳ ಮಂಜುನಾಥ ಧರ್ಮ ಮತ್ತು ನ್ಯಾಯವನ್ನು ಕೊಡುತ್ತಾನೆ. ಅವನು ದೇವರಾಗಿರುವ ಕಾರಣ ಅವನಿಂದ ಯಾವತ್ತು ನ್ಯಾಯನೇ ಸಿಗುತ್ತದೆ ಎಂದರು


Click below to Share News

Related Articles

Leave a Reply

Your email address will not be published. Required fields are marked *

Back to top button
error: Content is protected !!