ಸಮಗ್ರ ಸುದ್ದಿ
ಪುಣಚ : ಆಟೋರಿಕ್ಷಾ ಪಲ್ಟಿ, ಚಾಲಕ ಜಗನ್ನಾಥ ಪೈಸಾರಿ ಸಾವು
![](https://veekshakanews.com/wp-content/uploads/2023/06/IMG-20230613-WA0083-1-780x470.jpg)
ವಿಟ್ಲ: ಚಲಿಸುತ್ತಿದ್ದ ಆಟೋರಿಕ್ಷಾಕ್ಕೆ ಅಡ್ಡಲಾಗಿ ಬಂದ ದನವನ್ನು ತಪ್ಪಿಸುವ ವೇಳೆ ನಿಯಂತ್ರಣ ತಪ್ಪಿ ಆಟೋರಿಕ್ಷಾದಿಂದ ರಸ್ತೆಗೆ ಎಸೆಯಲ್ಪಟ್ಟ ಚಾಲಕ ಗಂಭೀರವಾಗಿ ಗಾಯಗೊಂಡು ಮೃತಪಟ್ಟ ಘಟನೆ ಪುಣಚದಲ್ಲಿ ಮಂಗಳವಾರ ನಡೆದಿದೆ.
![](https://veekshakanews.com/wp-content/uploads/2023/06/image_editor_output_image1418865057-1686674167164.jpg)
ಮಂಗಳವಾರ ಮಧ್ಯಾಹ್ನ ಊಟ ಮುಗಿಸಿದ ಬಳಿಕ ಪುಣಚದ ಅಟೋರಿಕ್ಷಾ ಪಾರ್ಕಿಂಗ್ ಸ್ಥಳಕ್ಕೆ ಬರುತ್ತಿದ್ದ ಸಂದರ್ಭದಲ್ಲಿ ಮಣಿಲ ಎಂಬಲ್ಲಿ ದುರ್ಘಟನೆ ಸಂಭವಿಸಿದ್ದು, ಆಟೋರಿಕ್ಷಾ ರಸ್ತೆಗೆ ಪಲ್ಟಿಯಾಗಿ ಬಿದ್ದ ಕಾರಣ, ತಲೆಗೆ ಗಂಭೀರ ಗಾಯವಾಗಿದ್ದು, ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಆ ವೇಳೆಗಾಗಲೇ ಅವರು ಮೃತಪಟ್ಟಿದ್ದರೆನ್ನಲಾಗಿದೆ.
ತುಳು ನಾಟಕ ರಂಗದಲ್ಲಿ ಹಾಸ್ಯ ಅಭಿನಯದ ಮೂಲಕ ಮಿಂಚಿದ್ದಅವರು, ಕಳೆದ ಮೂವತ್ತು ವರ್ಷಗಳಿಂದ ಆಟೋರಿಕ್ಷಾ ಚಾಲಕರಾಗಿ’ರಿಕ್ಷಾ ಜಗ್ಗಣ್ಣ’ಎಂದೇ ಗುರುತಿಸಲ್ಪಟ್ಟಿದ್ದರು.ಮೃತರ ಮನೆಗೆ ಹಲವಾರು ಮಂದಿ ಭೇಟಿ ನೀಡಿ ಸಂತಾಪ ಸೂಚಿಸಿದರು.ಮೃತರು ಪತ್ನಿ, ಪುತ್ರಿ, ಪುತ್ರ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.