ರಾಜ್ಯ
ಕಾಂಗ್ರೆಸ್ ಸರ್ಕಾರದ ಅನ್ನಭಾಗ್ಯ ಯೋಜನೆ ಬಡವರ ಹೊಟ್ಟೆ ತುಂಬಿಸುವ ಯೋಜನೆ – ಬಿಜೆಪಿ ಶಾಸಕ ಗುರುರಾಜ್ ಗಂಟಿಹೊಳಿ
ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಅನ್ನಭಾಗ್ಯ ಯೋಜನೆಯನ್ನು ಉಡುಪಿ ಜಿಲ್ಲೆಯ ಬೈಂದೂರಿನ ಬಿಜೆಪಿ ಶಾಸಕ ಗುರುರಾಜ್ ಗಂಟಿಹೊಳಿ ಸ್ವಾಗತಿಸಿದ್ದಾರೆ.
ವಿಧಾನಸಭೆಯಲ್ಲಿ ಕಾಂಗ್ರೆಸ್ ಸರ್ಕಾರ ಮಂಡಿಸಿದ್ದ ಬಜೆಟ್ ಮೇಲಿನ ಚರ್ಚೆ ನಡೆಯಿತು. ಚರ್ಚೆಯಲ್ಲಿ ವಿರೋಧ ಹಾಗೂ ಆಡಳಿತ ಪಕ್ಷದ ಸದಸ್ಯರ ನಡುವೆ ವಾಕ್ಸಮರ ನಡೆಯಿತು. ಈ ವೇಳೆ ಮಾತನಾಡಿದ ಬಿಜೆಪಿ ಶಾಸಕ ಗುರುರಾಜ್ ಗಂಟಿಹೊಳಿ, ಸರ್ಕಾರದ ಅನ್ನಭಾಗ್ಯ ಯೋಜನೆಯನ್ನು ಸ್ವಾಗತಿಸಿದ್ರು. ಬಡವರ ಹೊಟ್ಟೆ ತುಂಬಿಸುವ ಯೋಜನೆ ಇದಾಗಿದ್ದು, ಯಾವುದೇ ಸರ್ಕಾರ ಈ ಯೋಜನೆ ಜಾರಿ ಮಾಡಿದ್ರೂ, ತಾನು ಸ್ವಾಗತಿಸುವುದಾಗಿ ಹೇಳಿದ್ದಾರೆ.
ಇನ್ನು ಮಾಜಿ ಸಚಿವ ಆರಗ ಜ್ಞಾನೇಂದ್ರ ಮಾತನಾಡಿ, ಬಜೆಟ್ನಲ್ಲಿ ಇಲಾಖಾವರು ಹಣ ಕಡಿತಕ್ಕೆ ಆಕ್ಷೇಪ ವ್ಯಕ್ತಪಡಿಸಿದರು. ಪ್ರತಿ ಇಲಾಖೆಗೂ ಹಣ ಕಡಿತಗೊಳಿಸಲಾಗಿದೆ. ಅಭಿವೃದ್ಧಿ ಪರವಾಗಿ ಬಜೆಟ್ ಮಂಡನೆ ಆಗಿಲ್ಲ. ಕೇವಲ ಗ್ಯಾರಂಟಿಗಳ ಜಾರಿಗಾಗಿ ಅಭಿವೃದ್ಧಿ ಕುಂಟಿತ ಮಾಡಲಾಗಿದೆ ಎಂದು ವಾಗ್ದಾಳಿ ನಡೆಸಿದರು.