ರಾಜ್ಯ

ರಾಜ್ಯ ಸರ್ಕಾರದ ಮಹತ್ವಾಂಕ್ಷಿ ಯೋಜನೆಗಳಲ್ಲೊಂದಾದ “ಗೃಹ ಜ್ಯೋತಿ ಯೋಜನೆ ” ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಘೋಷಣೆ.

Click below to Share News

ಬೆಂಗಳೂರು: ಸರ್ಕಾರದ ಮಹತ್ವಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹ ಜ್ಯೋತಿ ಯೋಜನೆಗೆ ರಾಜ್ಯ ಸರ್ಕಾರ ಡೆಡ್ ಲೈನ್ ವಿಧಿಸಿದೆ. ಗೃಹ ಜ್ಯೋತಿ ಕುರಿತಂತೆ ವಿಧಾನಸಭೆಯಲ್ಲಿ ನಡೆದ ಚರ್ಚೆಯ ವೇಳೆ ಖುದ್ದು ಇಂಧನ ಸಚಿವರೇ ಈ ಬಗ್ಗೆ ಉತ್ತರ ಕೊಟ್ಟಿದ್ದಾರೆ.

ಇಂದು ವಿಧಾನಸಭೆಯಲ್ಲಿ ನಡೆದ ಚರ್ಚೆಯ ಸಂದರ್ಭದಲ್ಲಿ ವಿರೋಧ ಪಕ್ಷದವರು ಗೃಹ ಜ್ಯೋತಿ ಯೋಜನೆ ಜಾರಿಯಲ್ಲಿ ಆಗಿರುವ ಗೊಂದಲಗಳ ಬಗ್ಗೆ ಮಾತನಾಡಿದರು. ಈ ಸಂದರ್ಭದಲ್ಲಿ ಉತ್ತರ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್, ಗೃಹ ಜ್ಯೋತಿಗೆ ಅರ್ಜಿ ಸಲ್ಲಿಸಲು ಈ ಮೊದಲು ಕಡೆಯ ದಿನಾಂಕವನ್ನು ನಿಗದಿಪಡಿಸಿರಲಿಲ್ಲ. ಈಗ, ಕಡೆಯ ದಿನಾಂಕವನ್ನು ನಿಗದಿಪಡಿಸಲು ನಿರ್ಧರಿಸಿದ್ದೇವೆ. ಅದರಂತೆ, ಜೂ. 27ರಂದು ಗೃಹ ಜ್ಯೋತಿ ಅರ್ಜಿ ಸಲ್ಲಿಕೆಗೆ ಕಡೆಯ ದಿನವಾಗಿರುತ್ತದೆ ಎಂದು ಜಾರ್ಜ್ ತಿಳಿಸಿದ್ದಾರೆ


Click below to Share News

Related Articles

Leave a Reply

Your email address will not be published. Required fields are marked *

Back to top button
error: Content is protected !!