ರಾಜ್ಯ

ಕೆ.ಆರ್ ಪುರ ತಹಸೀಲ್ದಾರ್, ಪುತ್ತೂರು ಮೂಲದ ಅಜಿತ್ ಕುಮಾರ್ ರೈ ಮನೆ ಮೇಲೆ ಲೋಕಾಯುಕ್ತ ದಾಳಿ.

Click below to Share News

ಬೆಂಗಳೂರು: ಕೆ.ಆರ್.ಪುರ ತಹಶೀಲ್ದಾರ್ ಹುದ್ದೆಯಲ್ಲಿದ್ದ ಕೆಎಎಸ್ ಅಧಿಕಾರಿ ಅಜಿತ್ ಕುಮಾರ್ ರೈ ಸೊರಕೆ ಮನೆ ಮತ್ತು ಅವರ ನಿಕಟವರ್ತಿಗಳಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದು ಶೋಧ ನಡೆಸುತ್ತಿದ್ದಾರೆ. ಬೃಹತ್ ಪ್ರಮಾಣದ ಹಣದ ಕಂತೆಯೇ ಸಿಕ್ಕಿದೆ ಎಂದು ವರದಿಯಾಗಿದೆ.


ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಮೇಲೆ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಅಡಿಯಲ್ಲಿ ಲೋಕಾಯುಕ್ತದ ಬೆಂಗಳೂರು ನಗರ ಘಟಕದ ಪೊಲೀಸರು ಅಜಿತ್ ಕುಮಾರ್ ರೈ ವಿರುದ್ಧ ಎಫ್‌ಐಆರ್ ದಾಖಲಿಸಿದ್ದು, ತನಿಖೆ ಆರಂಭಿಸಿದ್ದಾರೆ.

ಅಜಿತ್ ಕುಮಾರ್ ರೈ

ಲೋಕಾಯುಕ್ತ ಎಸ್ ಪಿ ಕೆ.ವಿ. ಅಶೋಕ್ ನೇತೃತ್ವದಲ್ಲಿ ಅಜಿತ್ ಅವರ ಮನೆ ಹಾಗೂ ಇತರ ಹತ್ತು ಸ್ಥಳಗಳ ಮೇಲೆ ಬುಧವಾರ ಬೆಳಿಗ್ಗೆ ಏಕಕಾಲಕ್ಕೆ ದಾಳಿ ಮಾಡಲಾಗಿದೆ. ಅಜಿತ್ ಕುಮಾರ್ ಅವರ ಮನೆಯಲ್ಲಿ ಬೃಹತ್ ಪ್ರಮಾಣದ ನೋಟಿನ ಕಂತೆಯೇ ಪತ್ತೆಯಾಗಿದೆ. ಅದನ್ನು ವಶಕ್ಕೆ ಪಡೆಯಲಾಗಿದೆ.
ಸರ್ವೆಯ ಸೊರಕೆಯವರಾದ ಅಜಿತ್ ಕುಮಾರ್ ರೈ ಈ ಹಿಂದೆ ರಾಜಕಾಲುವೆ ಒತ್ತುವರಿದಾರರಿಗೆ ಸಹಕರಿಸಿದ್ದ ಆರೋಪದ ಮೇಲೆ ಅಮಾನತುಗೊಳಗಾಗಿದ್ದರು.


Click below to Share News

Related Articles

Leave a Reply

Your email address will not be published. Required fields are marked *

Back to top button
error: Content is protected !!