ರಾಜ್ಯ
ಮಸೂದ್, ಫಾಝಿಲ್ , ಜಲೀಲ್ , ದೀಪಕ್ ರಾವ್ ಕುಟುಂಬಕ್ಕೆ ತಲಾ 25 ಲಕ್ಷ ಪರಿಹಾರ
ಬೆಂಗಳೂರು : ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ವಿವಿಧ ಪ್ರಕರಣಗಳಲ್ಲಿ ಮೃತಪಟ್ಟವರ ಮಸೂದ್, ಫಾಝಿಲ್ , ಜಲೀಲ್ , ದೀಪಕ್ ರಾವ್ ಕುಟುಂಬಕ್ಕೆ ತಲಾ 25 ಲಕ್ಷ ಸರ್ಕಾರದ ವತಿಯಿಂದ ಪರಿಹಾರ ಧನ ಮಂಜೂರು ಮಾಡುವಂತೆ ಆದೇಶ ಹೊರಡಿಸಿದೆ.
ಕಳೆದ ವರ್ಷದ ಜುಲೈ 19ರಂದು ಬೆಳ್ಳಾರೆಯ ಮಸೂದ್, 28ರಂದು ಮಂಗಳಪೇಟೆಯ ಮುಹಮ್ಮದ್ ಫಾಝಿಲ್, ಕಳೆದ ವರ್ಷದ ಡಿಸೆಂಬರ್ 24ರಂದು ಕಾಟಿಪಳ್ಳದ ಅಬ್ದುಲ್ ಹಾಗೂ 2018ರ ಜನವರಿ 3ರಂದು ಕಾಟಿಪಳ್ಳದ ದೀಪಕ್ ರಾವ್ ಅವರನ್ನು ದುಷ್ಕರ್ಮಿಗಳು ಕೊಲೆಗೈದಿದ್ದರು ಎಂದು ಪ್ರಕರಣ ದಾಖಲಾಗಿತ್ತು.
ಜೂನ್ 19ರಂದು ಪರಿಹಾರ ಧನದ ಚೆಕ್ ಪಡೆಯುವಂತೆ ಅದೇಶದಲ್ಲಿ ತಿಳಿಸಲಾಗಿದೆ.