ರಾಜ್ಯ

ರಾಜ್ಯ ಧಾರ್ಮಿಕ ಪರಿಷತ್ತು, ಜಿಲ್ಲಾ ಧಾರ್ಮಿಕ ಪರಿಷತ್ತು, ಇತರ ಸರ್ಕಾರಿ, ಅರೆ ಸರ್ಕಾರಿ ನಿಗಮ ಹಾಗೂ ಇತರ ಎಲ್ಲಾ ಅಧ್ಯಕ್ಷರು, ನಿರ್ದೇಶಕರುಗಳು,ಸದಸ್ಯರುಗಳ ನಾಮ ನಿರ್ದೇಶನಗಳನ್ನು ರದ್ದು ಪಡಿಸಲು ಆದೇಶ

Click below to Share News

ಬೆಂಗಳೂರು: ಮೇ 22ರಲ್ಲಿ ಈ ಹಿಂದಿನ ಸರ್ಕಾರದ ಅವಧಿಯಲ್ಲಿ ಕರ್ನಾಟಕ ರಾಜ್ಯ ಸರ್ಕಾರದ ವಿವಿಧ ನಿಗಮ ಮಂಡಳಿ, ಸ್ವಾಯತ್ತ ಸಂಸ್ಥೆಗಳು ಮತ್ತು ಇತರ ಸರ್ಕಾರಿ, ಅರೆ ಸರ್ಕಾರಿ ಹಾಗೂ ಇತರ ಎಲ್ಲಾ ಅಧ್ಯಕ್ಷರು/ ನಿರ್ದೇಶಕರುಗಳು/ ಸದಸ್ಯರುಗಳ ನಾಮ ನಿರ್ದೇಶನಗಳನ್ನು ದಿನಾಂಕ:22.05.2013ರಿಂದ ಜಾರಿಗೆ ಬರುವಂತೆ ರದ್ದುಪಡಿಸಿ ಆದೇಶ ಹೊರಡಿಸಲು ಸೂಚಿಸಲಾಗಿದೆ.


ಆದರಿಂದ, ರಾಜ್ಯ ಧಾರ್ಮಿಕ ಪರಿಷತ್ತು, ಜಿಲ್ಲಾ ಧಾರ್ಮಿಕ ಪರಿಷತ್ತು, ಆರಾಧನಾ ಸಮಿತಿ ಶ್ರೀ ಮಲೆ ಮಹದೇಶ್ವರ ಸ್ವಾಮಿ ಅಭಿವೃದ್ಧಿ ಪ್ರಾಧಿಕಾರ ಹಾಗೂ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಲ್ಲಿನ ಸರ್ಕಾರದಿಂದ ನಾಮ ನಿರ್ದೇಶಿತ ಸದಸ್ಯರ ಸದಸ್ಯತ್ವವನ್ನು ದಿನಾಂಕ:22.05.2023 ರಿಂದ ಜಾರಿಗೆ ಬರುವಂತೆ ರದ್ದುಪಡಿಸಿ ಆದೇಶಿಸಿದ.


ಮುಂದುವರೆದು, ಆಯುಕ್ತರು, ಧಾರ್ಮಿಕ ದತ್ತಿ ಇಲಾಖೆ ಇವರ ವ್ಯಾಪ್ತಿಯಲ್ಲಿನ ವಿವಿಧ ನಿಗಮ, ಮಂಡಳಿ, ಸ್ವಾಯತ್ತ ಸಂಸ್ಥೆಗಳು ಮತ್ತು ಇತರ ಸರ್ಕಾರಿ, ಅರೆ ಸರ್ಕಾರಿ ಹಾಗೂ ಇತರೆ ಎಲ್ಲಾ ಅಧ್ಯಕ್ಷರು/ ನಿರ್ದೇಶಕರುಗಳು/ ಸದಸ್ಯರುಗಳ ನಾಮ ನಿರ್ದೇಶನಗಳನ್ನು ದಿನಾಂಕ:22.05.2023ರಿಂದ ಜಾರಿಗೆ ಬರುವಂತ ರದ್ದು ಪಡಿಸಲು ಸೂಚಿಸಿದೆ ಎಂದು ಕೆ ಪಿ ಹೇಮಂತರಾಜು ಸರಕಾರ ಅಧೀನ ಕಾರ್ಯದರ್ಶಿ ಕಂದಾಯ ಇಲಾಖೆ ಇವರು ಅಧಿಸೂಚನೆ ಹೊರಡಿಸಿದ್ದಾರೆ.


Click below to Share News

Related Articles

Leave a Reply

Your email address will not be published. Required fields are marked *

Back to top button
error: Content is protected !!