ರಾಜ್ಯ

ಪುತ್ತೂರು, ಜ.03: ಹುಬ್ಬಳ್ಳಿ ಅಯೋಧ್ಯಾ ಕರಸೇವಕರ ವಿರುದ್ಧ ಪ್ರಕರಣ : ಸರಕಾರದ ವಿರುದ್ಧ ಹಿಂ.ಜಾ.ವೇಯಿಂದ ಪ್ರತಿಭಟನೆ.

Click below to Share News

ಪುತ್ತೂರು: ಹುಬ್ಬಳ್ಳಿಯಲ್ಲಿ ರಾಮಭಕ್ತರನ್ನು ಬಂಧಿಸಿರುವ ಪೊಲೀಸ್‌ ಇಲಾಖೆಯ ವಿರುದ್ಧ ಹಾಗೂ ಕಾಂಗ್ರೆಸ್ ಸರಕಾರ ಹಿಂದೂ ವಿರೋಧಿ ಧೋರಣೆಯನ್ನು ಖಂಡಿಸಿ ದರ್ಬೆ ವೃತ್ತದಲ್ಲಿ ಹಿಂದೂ ಜಾಗರಣಾ ವೇದಿಕೆ ಪುತ್ತೂರು ಜಿಲ್ಲೆ ವತಿಯಿಂದ ಜ.3ರಂದು ಬೃಹತ್ ಪ್ರತಿಭಟನೆ ನಡೆಯಿತು.

ಬೃಹತ್ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಬಜರಂಗದಳ ಪ್ರಾಂತ ಸಂಯೋಜಕ ಮುರಳೀಕೃಷ್ಣ ಹಸಂತಡ್ಕ, ರಾಮನ ಕೆಲಸ ಮಾಡುವವರನ್ನು ಹತ್ತಿಕ್ಕುವ

ಪ್ರಯತ್ನ ಸಿದ್ಧರಾಮಯ್ಯ ಸರಕಾರ ಮಾಡಿದರೆ ಲಂಕೆಯ ಉದಾಹರಣೆಯ ಮೂಲಕ ಸರಕಾರಕ್ಕೆ ಪ್ರತಿ ಉತ್ತರ ನೀಡಬೇಕಾಗಬಹುದು ಎಂದು ಎಚ್ಚರಿಕೆ ನೀಡಿದರು.
ಕಾಂಗ್ರೆಸ್‌ ಏಜೆಂಟರ ಮೂಲಕ ಅಧಿಕಾರಿಗಳನ್ನು ನೇಮಿಸುವ ಕಾರ್ಯ ಒಂದೆಡೆಯಾದರೆ, ಇನ್ನೊಂದೆಡೆ ಅಲ್ಪಸಂಖ್ಯಾತರ ಓಟಿಗೋಸ್ಕರ ಹಿಂದೂಗಳನ್ನು, ರಾಮಭಕ್ತರನ್ನು ಧಮನಿಸುವ ಕಾರ್ಯ ನಡೆಸುತ್ತಿದೆ. ದೇಶದಲ್ಲಿ ರಾಮನ ನಾಡು ನಿರ್ಮಾಣವಾಗುತ್ತಿದೆಯೇ ಹೊರತು ರಾವಣನ ನಾಡು ನಿರ್ಮಾಣ ಆಗುತ್ತಿಲ್ಲ ಎಂಬುದನ್ನು ಸಿದ್ಧರಾಮಯ್ಯನವರು ಅರ್ಥ ಮಾಡಿಕೊಳ್ಳಬೇಕು. ರಾಷ್ಟ್ರ ಮಂದಿರ ನಿರ್ಮಾಣವಾಗುತ್ತಿರುವ ಈ ಕಾಲಘಟ್ಟದಲ್ಲಿ ಸಂಭ್ರಮದಿಂದ ಇರಬೇಕಾದ ಅಸಂಖ್ಯಾತ ಹಿಂದೂಗಳ ಮಾನಸಿಕ ಸ್ಥೆರ್ಯವನ್ನು ಕುಗ್ಗಿಸುವ ಕೆಲಸ ನಡೆಯುತ್ತಿದೆ. ಸಿದ್ಧರಾಮಯ್ಯನವರಿಗೆ ತಾಕತ್ತಿದ್ದರೆ ರಾಮರಾಜ್ಯ ನಿರ್ಮಾಣದ ಕನಸು ತಡೆಯಲಿ ಎಂದು ಸವಾಲು ಎಸೆದರು.
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಮಾತನಾಡಿ, ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಕನಸು ನನಸಾಗುತ್ತಿರುವ ಸಂದರ್ಭದಲ್ಲಿ 32 ವರ್ಷಗಳ ಹಿಂದೆ ರಾಮ ಮಂದಿರಕ್ಕಾಗಿ ಹೋರಾಟ ಮಾಡಿದವರನ್ನು ಬಂಧಿಸುವ ಕೆಲಸ ಸಿದ್ದರಾಮಯ್ಯ ಸರಕಾರದಿಂದ ಆಗುತ್ತಿದೆ. ಈ ಮೂಲಕ ಹಿಂದೂಗಳ ಮಾನಸಿಕ ಧೈರ್ಯ ಕುಗ್ಗಿಸುವ ಕೆಲಸ ಮಾಡುತ್ತಿರುವುದನ್ನು ನಾವು ಖಂಡಿಸುತ್ತೇವೆ. ಸೀತೆ ರಾಮನ ಜತೆಗೂಡಿ ರಾವಣನನ್ನು ಹೇಗೆ ಧ್ವಂಸ ಮಾಡಿದ್ದಾರೆ ಅದೇ ರೀತಿಯ ಉತ್ತರ ನೀಡಲು ಮಾತೆಯರು ಸೀತೆಯರಾಗಿ ಸರಕಾರವನ್ನು ಧ್ವಂಸ ಮಾಡಬೇಕಾಗಬಹುದು ಎಂದು ಎಚ್ಚರಿಕೆ ನೀಡಿದರು.

ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಚಂದ್ರಶೇಖರ ರಾವ್‌ ಬಪ್ಪಳಿಗೆ ಮಾತನಾಡಿ, 30 ವರ್ಷಗಳ ಹಿಂದೆ ಅಯೋಧ್ಯೆಯಲ್ಲಿ ರಾಮ ಮಂದಿರಕ್ಕೆ ಹೋರಾಟವನ್ನು ನಡೆಸಿದ ರಾಮಭಕ್ತರ ಮೇಲೆ ಸಿದ್ದರಾಮಯ್ಯ ಸರಕಾರ ಪುನಃ ಕೇಸು ಹಾಕಿ ಬಂಧಿಸಲು ಮುಂದಾಗುತ್ತಿದ್ದು, ಇನ್ನಷ್ಟು ರಾಮಭಕ್ತರನ್ನು ಬಂಧನ ಮಾಡಲಿ. ಪರಿಣಾಮ ಹಿಂದೂ ಸಮಾಜಕ್ಕೆ ಮತ್ತಷ್ಟು ಶಕ್ತಿ ಬರಲಿದೆ ಎಂಬುದನ್ನು ಸಿದ್ಧರಾಮಯ್ಯ ಅರ್ಥ ಮಾಡಿಕೊಳ್ಳಲಿ ಎಂದು ಹೇಳಿದ ಅವರು, 30 ವರ್ಷ ಅಯೋಧ್ಯೆಯ ಕರಸೇವೆಯಲ್ಲಿ ಪಾಲ್ಗೊಂಡ ವಿಚಾರವನ್ನು ಎಳೆ ಎಳೆಯಾಗಿ ತೆರೆದಿಟ್ಟರು.

ಪ್ರತಿಭಟನೆಯನ್ನುದ್ದೇಶಿಸಿ ಡಾ.ಸುರೇಶ್ ಪುತ್ತೂರಾಯ ಮಾತನಾಡಿದರು. ವಿಶ್ವ ಹಿಂದೂ ಪರಿಷತ್ ಮುಖಂಡ ಮೋಹನದಾಸ್‌ ಕಾಣಿಯೂರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಪ್ರತಿಭಟನಾ ಸಭೆಯಲ್ಲಿ ನಗರಸಭೆ ನಿಕಟಪೂರ್ವ ಅಧ್ಯಕ್ಷ ಜೀವಂಧ‌ರ್ ಜೈನ್, ಬಿಜೆಪಿ ಹಿರಿಯ ಮುಖಂಡರಾದ ಗೋಪಾಲಕೃಷ್ಣ ಹೇರಳೆ, ಅಪ್ಪಯ್ಯ ಮಣಿಯಾಣಿ, ರಾಜೇಶ್‌ ಬನ್ನೂರು, ರಾಧಾಕೃಷ್ಣ ಬೋರ್ಕರ್, ನಗರಸಭೆ ಸದಸ್ಯ ಜಗನ್ನಿವಾಸ ರಾವ್, ಆರ್.ಸಿ ನಾರಾಯಣ, ಶಶಿಕುಮಾ‌ರ್ ಬಾಲ್ಯೂಟ್ಟು, ಸತೀಶ್ ನಾಯ್ಕ, ವಿಹಿಂಪದ ಡಾ. ಪ್ರಸನ್ನ ಭಟ್, ಶ್ರೀಧರ್ ತೆಂಕಿಲ, ಸೀತಾರಾಮ ರೈ ಕೆದಂಬಾಡಿಗುತ್ತು,, ಮಹಿಳಾ ಬಿಜೆಪಿಯ ಗೌರಿ ಬನ್ನೂರು, ಜಯಶ್ರೀ ಶೆಟ್ಟಿ, ನಿಶಾಂತ್, ಮೀನಾಕ್ಷಿ ಶಾಂತಿಗೋಡು, ದೀಕ್ಷಾ ಪೈ, ಹರಿಣಿ ಪುತ್ತೂರಾಯ, ಸತೀಶ್ ಮತ್ತಿತರರು ಉಪಸ್ಥಿತರಿದ್ದರು. ಅಜಿತ್ ರೈ ಹೊಸಮನೆ ಸ್ವಾಗತಿಸಿದರು. ದಿನೇಶ್ ಪಂಜಿಗ ಕಾರ್ಯಕ್ರಮ ನಿರೂಪಿಸಿದರು.


Click below to Share News

Related Articles

Leave a Reply

Your email address will not be published. Required fields are marked *

Back to top button
error: Content is protected !!