ರಾಜ್ಯ

ಹಿಂದಿನ ಬಿಜೆಪಿ ಸರಕಾರ ಕೈಗೊಂಡ ಎಲ್ಲಾ ಕಾಮಗಾರಿಗಳಿಗೆ ಹಣ ಪಾವತಿಗೆ ತಡೆ: ರಾಜ್ಯ ಸರಕಾರ ಸುತ್ತೋಲೆ

Click below to Share News

ಬೆಂಗಳೂರು, ಮೇ 22: ಹಿಂದಿನ ಸರಕಾರ ಕೈಗೊಂಡ ಎಲ್ಲ ಇಲಾಖೆಗಳ ಹಾಗೂ ಇಲಾಖೆಗಳ ಅಧೀನಕ್ಕೊಳಪಡುವ ನಿಗಮ, ಮಂಡಳಿ, ಪ್ರಾಧಿಕಾರಗಳ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಎಲ್ಲ ಮುಂದಿನ ಹಣ ಬಿಡುಗಡೆ, ಪಾವತಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ತಡೆ ಹಿಡಿಯಲು ರಾಜ್ಯ ಸರಕಾರ ಆದೇಶ ಹೊರಡಿಸಿದೆ.


ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಿರ್ದೇಶನದ ಹಿನ್ನೆಲೆಯಲ್ಲಿ ಪ್ರಾರಂಭವಾಗದಿರುವ ಸರಕಾರದ ಎಲ್ಲ ಕಾಮಗಾರಿಗಳನ್ನು ತಡೆ ಹಿಡಿಯುವಂತೆ ಎಲ್ಲ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳು ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಆರ್ಥಿಕ ಇಲಾಖೆಯ ಸರಕಾರದ ಕಾರ್ಯದರ್ಶಿ ಡಾ.ಏಕರೂಪ್ ಕೌರ್ ಸುತ್ತೋಲೆ ಹೊರಡಿಸಿದ್ದಾರೆ.


Click below to Share News

Related Articles

Leave a Reply

Your email address will not be published. Required fields are marked *

Back to top button
error: Content is protected !!