ತಾಲೂಕು ಸುದ್ದಿ

ವಿಜಯೋತ್ಸವ ಆಚರಿಸಿ ಮರಳುತ್ತಿದ್ದ ಬಿಜೆಪಿ ಕಾರ್ಯಕರ್ತರಿಗೆ ಚೂರಿ ಇರಿತ ಪ್ರಕರಣ

Click below to Share News

ಮುಡಿಪು : ಬೊಳಿಯಾರ್ ನಲ್ಲಿ ಚೂರಿ ಇರಿತಕ್ಕೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಿಜೆಪಿ ಕಾರ್ಯಕರ್ತರನ್ನು ಭೇಟಿಮಾಡಿ ಆರೋಗ್ಯ ವಿಚಾರಿಸಿದ ನೂತನ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ.

ದೆಹಲಿಯಿಂದ ವಾಪಸಗುತ್ತಿದಂತೆ ಬಿಜೆಪಿ ಕಾರ್ಯಕರ್ತರಾದ ಹರೀಶ್ ಅಂಚನ್ ಹಾಗೂ ವಿನೋದ್ ಅವರ ಅರೋಗ್ಯ ವಿಚಾರಿಸಿದರು.

ಬಿಜೆಪಿ ವಿಜಯೋತ್ಸವ ಆಚರಿಸಿ ಮರಳುತ್ತಿದ್ದ ಬಿಜೆಪಿ ಕಾರ್ಯಕರ್ತರಿಬ್ಬರಿಗೆ ಚೂರಿ ಇರಿತ ಪ್ರಕರಣ ನಡೆದ ಘಟನೆಯಲ್ಲಿ ಒಟ್ಟು ಐವರು ಆರೋಪಿಗಳನ್ನು ಕೊಣಾಜೆ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಶಾಕೀರ್(28), ರಜಾಕ್(40), ಅಬೂಬಕ್ಕರ್ ಸಿದ್ದಿಕ್(35), ಸವಾದ್(18) ಹಾಗೂ ಹಫೀಝ್(24) ಎಂದು ಗುರುತಿಸಲಾಗಿದೆ.

ಕೊಣಾಜೆ ಠಾಣಾ ವ್ಯಾಪ್ತಿಯ ಬೊಳಿಯಾರ್ ಬಾರ್‌ನ ಮುಂಭಾಗದಲ್ಲಿ ಚಾಕು ಇರಿತ ನಡೆದಿದ್ದು, ಸಿಸಿಟಿವಿ ದೃಶ್ಯಗಳ ಆಧಾರದ ಮೇಲೆ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.


Click below to Share News

Related Articles

Leave a Reply

Your email address will not be published. Required fields are marked *

Back to top button
error: Content is protected !!