ಅಡ್ಕಸ್ಥಳ : ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಪಿಕಪ್ ವಾಹನದ ನಡುವೆ ಅಪಘಾತ ಪಿಕಪ್ ಚಾಲಕ ಮೃತ್ಯು..!!!
![](https://veekshakanews.com/wp-content/uploads/2023/09/IMG-20230926-WA0006-1-780x470.jpg)
ಕಾಸರಗೋಡು: ರಸ್ತೆ ಬದಿ ನಿಲ್ಲಿಸಿದ್ದ ಪಿಕಪ್ ಗೆ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಪಿಕಪ್ ಚಾಲಕ ಮೃತ ಪಟ್ಟ ಘಟನೆ ಕೇರಳ ಕರ್ನಾಟಕ ಗಡಿ ಪ್ರದೇಶವಾದ ಅಡ್ಕಸ್ಥಳದ ಸಮೀಪ ಮಂಗಳವಾರ ನಡೆದಿದೆ.
![](https://veekshakanews.com/wp-content/uploads/2023/09/IMG-20230926-WA0006-1024x576.jpg)
ಮೃತ ಚಾಲಕನನ್ನು ಪೆರ್ಲ ಮಣಿಯಂಪಾರೆ ಪಜ್ಜನದ ಮುಸ್ತಫಾ (43) ಎಂದು ಗುರುತಿಸಲಾಗಿದೆ. ಬಸ್ ನ ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲೆತ್ನಿಸಿದಾಗ ರಸ್ತೆ ಬದಿ ನಿಲ್ಲಿಸಿದ್ದ ಅಡಿಕೆ ಗಿಡ ಸಾಗಾಟದ ಪಿಕಪ್ ಗೆ ಬಸ್ಸು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
![](https://veekshakanews.com/wp-content/uploads/2023/09/IMG-20230926-WA0009-1003x1024.jpg)
ಮೃತ ಚಾಲಕನನ್ನು ಪೆರ್ಲ ಮಣಿಯಂಪಾರೆ ಪಜ್ಜನದ ಮುಸ್ತಫಾ (43) ಎಂದು ಗುರುತಿಸಲಾಗಿದೆ. ಬಸ್ ನ ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲೆತ್ನಿಸಿದಾಗ ರಸ್ತೆ ಬದಿ ನಿಲ್ಲಿಸಿದ್ದ ಅಡಿಕೆ ಗಿಡ ಸಾಗಾಟದ ಪಿಕಪ್ ಗೆ ಬಸ್ಸು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
![](https://veekshakanews.com/wp-content/uploads/2023/09/IMG-20230926-WA0007-1-1024x576.jpg)
ಘಟನೆಯಲ್ಲಿ ತಲೆಗೆ ಗಂಭೀರ ಗಾಯಗೊಂಡ ಮುಸ್ತಫಾ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ದರೂ ಜೀವ ಉಳಿಸಲಾಗಲಿಲ್ಲ ಎಂದು ತಿಳಿದು ಬಂದಿದೆ.
ಪಿಕಪ್ ವಾಹನ ದಲ್ಲಿದ್ದ ಇನ್ನೋರ್ವ ಗಾಯಗೊಂಡಿದ್ದು, ಬದಿಯಡ್ಕ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ.
ವೀಕ್ಷಕ ನ್ಯೂಸ್ ಗುಂಪಿಗೆ ಸೇರಲು ಈ ಕೆಳಗಿನ ಲಿಂಕ್ ಒತ್ತಿ.
https://chat.whatsapp.com/Jo0WSS41H91JtLovwy2HP4https://chat.whatsapp.com/Jo0WSS41H91JtLovwy2HP4