ತಾಲೂಕು ಸುದ್ದಿ

ಆರ್ಯಾಪು ಗ್ರಾ.ಪಂ. ಉಪಚುನಾವಣೆ : ಪುತ್ತಿಲ ಪರಿವಾರದ ಬೆಂಬಲಿತ ಅಭ್ಯರ್ಥಿಯಾಗಿ ಸುಬ್ರಹ್ಮಣ್ಯ ಬಲ್ಯಾಯ ದೊಡ್ಡಡ್ಕ ನಾಮಪತ್ರ ಸಲ್ಲಿಕೆ.

Click below to Share News

ಪುತ್ತೂರು : ಆರ್ಯಾಪು ಗ್ರಾಮ ಪಂಚಾಯತ್ ನ ಉಪಚುನಾವಣೆಗೆ ಪುತ್ತಿಲ ಪರಿವಾರದ ಬೆಂಬಲಿತ ಅಭ್ಯರ್ಥಿಯಾಗಿ ಸುಬ್ರಹ್ಮಣ್ಯ ಬಲ್ಯಾಯ ದೊಡ್ಡಡ್ಕ ಆರ್ಯಾಪು ಗ್ರಾಮ ಪಂಚಾಯತ್ ನಲ್ಲಿ ನಾಮಪತ್ರ ಸಲ್ಲಿಸಿದರು.

ಆರ್ಯಾಪು ಗ್ರಾಮ ಪಂಚಾಯತಿಯ ಆರ್ಯಾಪು ಎರಡನೇ ವಾರ್ಡ್‌ನ (ಆರ್ಯಾಪು 11) ಸದಸ್ಯರಾಗಿದ್ದ ನಿವೃತ್ತ ಎಸ್‌ಐ ರುಕ್ಕಯ್ಯ ಮೂಲ್ಯ ಅವರು ಇತ್ತೀಚೆಗೆ ಹೃದಯಾಘಾತದಿಂದ ನಿಧನ ಹೊಂದಿದ್ದು, ಈ ಹಿನ್ನೆಲೆ ಉಪಚುನಾವಣೆ ನಡೆಯಲಿದೆ.

ನಾಮಪತ್ರ ಸಲ್ಲಿಸುವ ಸಂದರ್ಭ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ಪುತ್ತಿಲ ಪರಿವಾರದ ಅಧ್ಯಕ್ಷರಾದ ಪ್ರಸನ್ನ ಕುಮಾರ್ ಮಾರ್ತಾ, ಪ್ರಧಾನ ಕಾರ್ಯದರ್ಶಿ ಉಮೇಶ್ ಗೌಡ ವೀರಮಂಗಲ, ಪ್ರಮುಖರಾದ ವಾಣಿಶ್ರೀ, ಶ್ರೀಕರಿ, ನವೀನ್ ರೈ ಮೇಗಿನಪಂಜ, ಜಗದೀಶ್ ಪೂಜಾರಿ, ನಾರಾಯಣ ಕುಲಾಲ್, ತಿಮ್ಮಪ್ಪ ನಾಯ್ಕ ಕುಂಜುರುಪಂಜ, ಗೋಪಾಲ ಭಟ್, ತಾರಾನಾಥ, ಸಂತೋಷ್ ಭಂಡಾರಿ, ಪವಿತ್ರ, ಸೀತಾರಾಮ ಶೆಟ್ಟಿ, ಕೃಷ್ಣ ಪ್ರಸಾದ್ ಶೆಟ್ಟಿ ಮೊದಲಾದರು ಉಪಸ್ಥಿತರಿದ್ದರು.


Click below to Share News

Related Articles

Leave a Reply

Your email address will not be published. Required fields are marked *

Back to top button
error: Content is protected !!