ತಾಲೂಕು ಸುದ್ದಿ

ಭಾರೀ ಮಳೆ ಹಿನ್ನೆಲೆ : ದ. ಕನ್ನಡ ಜಿಲ್ಲೆಯ 5 ತಾಲೂಕುಗಳಲ್ಲಿ ಶಾಲಾ-ಕಾಲೇಜಿಗೆ ರಜೆ ಘೋಷಣೆ

Click below to Share News

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಐದು ತಾಲೂಕಿನ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ಮಂಗಳೂರು, ಉಳ್ಳಾಲ, ಮುಲ್ಕಿ, ಬಂಟ್ವಾಳ ಹಾಗೂ ಮೂಡಬಿದಿರೆ ತಾಲೂಕಿನ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆಯಾಗಿದೆ.

ಇನ್ನುಳಿದ ಕಡೆಗಳಲ್ಲಿ ಅಲ್ಲಿ ಪ್ರಸ್ತುತ ಪರಿಸ್ಥಿತಿಗಳನ್ನು ನೋಡಿಕೊಂಡು ರಜೆ ಘೋಷಿಸುವ ಅಧಿಕಾರವನ್ನು ಆಯಾ ತಹಶೀಲ್ದಾರ್‌ಗಳಿಗೆ ನೀಡಲಾಗಿದೆ. ಶಾಲೆಯ ಮುಖ್ಯೋಪಾಧ್ಯರು, ಕಾಲೇಜಿನ ಪ್ರಾಂಶುಪಾಲರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಆಯಾ ಶಾಲೆ ಹಾಗೂ ಕಾಲೇಜುಗಳ ಪರಿಸ್ಥಿತಿಗಳನ್ನು ನೋಡಿಕೊಂಡು ತಹಶೀಲ್ದಾರ್ ಗೆ ಮಾಹಿತಿಯನ್ನು ರವಾನಿಸಬೇಕು. ಈ ಮಾಹಿತಿಗಳನ್ನು ಅವಲೋಕನ ಮಾಡಿ ತಹಶೀಲ್ದಾರ್ ರಜೆ ಘೋಷಿಸುವ ಅಧಿಕಾರ ಹೊಂದಿರುತ್ತಾರೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹೇಳಿದ್ದಾರೆ.

ಮಳೆ ಕೊರತೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೀರಿನ ಕೊರತೆ ಎದುರಾಗಿತ್ತು. ಸದ್ಯ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದ್ದು ನದಿ, ಹಳ್ಳ ಕೊಳ್ಳಗಳಲ್ಲಿ ನೀರಿನ ಹರಿವು ಆರಂಭಗೊಂಡಿದೆ.ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹವಾಮಾನ ಇಲಾಖೆಯು ಆರೆಂಜ್ ಅಲರ್ಟ್‌ ಘೋಷಣೆ ಮಾಡಿದೆ. ಈ ನಡುವೆ ತಗ್ಗು ಪ್ರದೇಶಗಳು ಜಲಾವೃತಗೊಳ್ಳುವ ಆತಂಕ ಕೂಡ ಇರುತ್ತೆ. ಗ್ರಾಮೀಣ ಭಾಗದಿಂದ ಅನೇಕರು ಶಾಲಾ-ಕಾಲೇಜುಗಳಿಗೆ ಆಗಮಿಸಬೇಕಾದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ ಐದು ತಾಲೂಕುಗಳ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದೆ.


Click below to Share News

Related Articles

Leave a Reply

Your email address will not be published. Required fields are marked *

Back to top button
error: Content is protected !!