ತಾಲೂಕು ಸುದ್ದಿ

ಬೆಳ್ತಂಗಡಿ : ಸೌಜನ್ಯ ಕೊಲೆ ಪ್ರಕರಣ : ಸಿಬಿಐ ನಿಂದ ಮರುತನಿಖೆಗೆ ಹೈಕೋರ್ಟ್‌ ಗೆ ಮೇಲ್ಮನವಿ ಸಲ್ಲಿಕೆ.

Click below to Share News

ಬೆಳ್ತಂಗಡಿ : ಕಳೆದ 11 ವರ್ಷಗಳ ಹಿಂದೆ ಕೊಲೆಯಾದ ಕಾಲೇಜು ವಿದ್ಯಾರ್ಥಿ ಸೌಜನ್ಯ ಪ್ರಕರಣ ಆರೋಪಿಗೆ ನಿರ್ದೋಷಿ ಎಂದು ತೀರ್ಪು ನೀಡಿದ ಹಲವು ತಿಂಗಳ ಬಳಿಕ ಇದೀಗ ಸಿಬಿಐ ಅಧಿಕಾರಿಗಳು ಹೈಕೋರ್ಟ್‌ ಗೆ ಮೇಲ್ಮನವಿ ಸಲ್ಲಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ವಿದ್ಯಾರ್ಥಿನಿ ಸೌಜನ್ಯ ಕೊಲೆ ಪ್ರಕರಣದಲ್ಲಿ ಸಿಬಿಐ ನ್ಯಾಯಾಲಯ ಆರೋಪಿ ಸಂತೋಷ್ ರಾವ್ ಗೆ ಸಾಕ್ಷದಾರ ಕೊರತೆಯಿಂದ ನಿರ್ದೋಷಿ ಎಂದು ತೀರ್ಪು ನೀಡಿದ್ದು ಇದೀಗ ನ.5 ಶನಿವಾರದಂದು ಸಿಬಿಐ ತನಿಖಾಧಿಕಾರಿಗಳು ಹೈ ಕೋರ್ಟ್‌ ಗೆ ಮೇಲ್ಮನವಿ ಎಂದು ತಿಳಿದುಬಂದಿದೆ. ಇದರ ಬಗ್ಗೆ ಕೆಲವೇ ದಿನಗಳಲ್ಲಿ ಹೈಕೋರ್ಟ್ ಪ್ರಕರಣ ದಾಖಲಿಸಿದ ದಾವೆಯ ಸಿಸಿ ಹೊರಡಿಸಲಿದೆ.

ಈವರೆಗೆ ಸೌಜನ್ಯ ಪರ ಹೋರಾಟ ಮಾಡುವವರಿಗೆ ಕರ್ನಾಟಕದಲ್ಲಿ ಇನ್ನೂ ಮುಂದೆ ಹೋರಾಟ ನಿರ್ಬಂಧ ಹೇರಲಾಗುತ್ತೆ ಎನ್ನಲಾಗಿದೆ. ಅದಲ್ಲದೇ ಪ್ರಕರಣ ಯಾವ ರೀತಿಯಲ್ಲಿ ಮುಂದುವರಿಯತ್ತದೆ ಎಂಬುದು ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.


Click below to Share News

Related Articles

Leave a Reply

Your email address will not be published. Required fields are marked *

Back to top button
error: Content is protected !!