ತಾಲೂಕು ಸುದ್ದಿ
ಬೆಳ್ತಂಗಡಿ: ಹೃದಯಾಘಾತದಿಂದ ನರ್ಸಿಂಗ್ ವಿದ್ಯಾರ್ಥಿನಿ ಮೃತ್ಯು!!
![](https://veekshakanews.com/wp-content/uploads/2023/08/WhatsApp-Image-2023-08-14-at-10.41.55-AM-600x375-2.jpeg)
ಬೆಳ್ತಂಗಡಿ : ಲೋ ಬಿಪಿಯಿಂದ ಹೃದಯಾಘಾತವಾಗಿ ಯುವತಿಯೋರ್ವಳು ಮೃತಪಟ್ಟ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಗಂಡಿಬಾಗಿಲು ಜಾತಿಮಾರು ನಿವಾಸಿ ರಾಜು ದೇವಾಡಿಗ ಮತ್ತು ಸರೋಜ ದಂಪತಿಗಳ ಮಗಳು ಸುಮಾ (19) ಮೃತ ಯುವತಿ.
ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ಮೊದಲ ವರ್ಷದ ನರ್ಸಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿ ಸುಮ ಮನೆಗೆ ಬಂದಿದ್ದಳು.
![](https://veekshakanews.com/wp-content/uploads/2023/08/WhatsApp-Image-2023-08-14-at-10.41.55-AM-600x375-1.jpeg)
ಆಗಸ್ಟ್ 9 ರಂದು ಅನಾರೋಗ್ಯದ ಕಾರಣದಿಂದ ಸ್ಥಳೀಯ ಆಸ್ಪತ್ರೆಗೆ ತೆರಳಿ ಔಷಧ ಪಡೆದು ಮನೆಗೆ ತೆರಳಿದ್ದಳು. ನಂತರ ಆಗಸ್ಟ್ 11 ರಂದು ಮತ್ತೆ ಅನಾರೋಗ್ಯ ಜಾಸ್ತಿಯಾದ ಕಾರಣ ಮಂಗಳೂರು
ಆಸ್ಪತ್ರೆಗೆ ಚಿಕಿತ್ಸೆಗೆ ಹೋಗಿದ್ದು, ಗುಣಮುಖವಾಗಿರುವ ಕಾರಣ ತನ್ನ ಅಕ್ಕನ ಮನೆ ಬಳ್ಳಮಂಜಕ್ಕೆ ತೆರಳಿದ್ದು, ಆಗಸ್ಟ್ 13 ರಂದು ಸಂಜೆ ಮತ್ತೆ ಅಸ್ವಸ್ಥಗೊಂಡಿದ್ದು, ಮಂಗಳೂರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಲೋ ಬಿಪಿ ಉಂಟಾಗಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ ಎಂದು ವರದಿಯಾಗಿದೆ.