ತಾಲೂಕು ಸುದ್ದಿ

ಕಡಬ : ಕಾಡು ಪ್ರಾಣಿ ಬೇಟೆ, ಮೂವರ ಬಂಧನ..!

Click below to Share News

ಕಡಬ : ಕಾಡು ಪ್ರಾಣಿಗಳ ಬೇಟೆಯಾಡಿ ಕಡಬ ಪೋಲಿಸರ ಬಲೆಗೆ ಬಿದ್ದ ಮೂರು ಆರೋಪಿಗಳ ಬಂಧನವಾದ ಘಟನೆ ಠಾಣಾ ವ್ಯಾಪ್ತಿಯ ಕುಂತೂರು ಬಳಿ ಮಂಗಳವಾರ ನಡೆದಿದೆ.

ಸಾಂದರ್ಭಿಕ ಚಿತ್ರ

ಬಲ್ಯ ರಕ್ಷಿತಾರಣ್ಯದಲ್ಲಿ ಬೇಟೆಯಾಡಿ ಮುಂಜಾವಿನ‌ವೇಳೆ ಮನೆಯ ಕಡೆ ತೆರಳುತ್ತಿದ್ದಾಗ ಗುಸ್ತು ತಿರುಗುತ್ತಿದ್ದ ಪೋಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾರೆ. ಬಂಧಿತರನ್ನು ನೆಲ್ಯಾಡಿ ಮೂಲದ ಬಿನು, ದಿನೇಶ್ ಹಾಗೂ ನವೀನ್ ಎಂದು ಗುರುತಿಸಲಾಗಿದೆ. ಕಡಬ ಎಸ್ಐ ಆಂಜನೇಯ ರೆಡ್ಡಿ ಮತ್ತು ಸಿಬ್ಬಂದಿಗಳು ಕುಂತೂರು ಬಳಿ ಬಂದಾಗ ಇನ್ನೋವ ಕಾರು ಅನುಮಾನಾಸ್ಪದವಾಗಿ ಚಲಾಯಿಸುತ್ತಿರುವುದು ಕಂಡು ಬಂತು, ವಾಹನ‌ ನಿಲ್ಲಿಸಿ ತಪಾಸನೆ ಮಾಡಿದಾಗ ಕಾರಿನಲ್ಲಿ ಬೇಟೆಯಾಡಿದ ಪ್ರಾಣಿಗಳು ಕಂಡು ಬಂದಿದೆ ಮೂವರು ಬೇಟೆಗಾರರು, ಬೇಟೆಯಾಡಿಡ ಒಂದು ಮುಳ್ಳು ಹಂದಿ, ಎರಡು ಬರಿಂಕ, ಒಂದು ಬೆರು ಎನ್ನುವ ಪ್ರಾಣಿಗಳು ಪತ್ತೆಯಾಗಿದೆ. ಜೊತೆಗೆ ಒಂದು ಕೋವಿ ಸಿಕ್ಕಿದೆ. ಮೂವರನ್ನು ಬಂದಿಸಿರುವ ಪೋಲೀಸರು, ಬೇಟೆಯಾಡಿದ ಪ್ರಾಣಿ, ಕೋವಿ ಹಾಗೂ ಕಾರನ್ನು‌ ವಶಪಡಿಸಿಕೊಂಡಿದ್ದಾರೆ. ಆರೋಪಿಗಳನ್ನು ಪೋಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಸಂಬಂಧಪಟ್ಟ ಇಲಾಖೆಗೆ ಪ್ರಕರಣ ದಾಖಲಿಸಲು ಆದೇಶಿಸಿದೆ ಎಂದು ತಿಳಿದು ಬಂದಿದೆ.


Click below to Share News

Related Articles

Leave a Reply

Your email address will not be published. Required fields are marked *

Back to top button
error: Content is protected !!