ತಾಲೂಕು ಸುದ್ದಿ

ಲೋಕಸಭಾ ಚುನಾವಣೆ: ಪುತ್ತಿಲ ಪರಿವಾರದ ಸ್ಪರ್ಧೆ ಬಹುತೇಕ ಖಚಿತ.

Click below to Share News

ಪುತ್ತೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಹಿಂದೂ ಫೈರ್ ಬ್ರಾಂಡ್ ಅರುಣ್ ಕುಮಾರ್ ಪುತ್ತಿಲ ಅವರ ಮುಂದಿನ ನಡೆಯನ್ನು ಬಿಚ್ಚಿಟ್ಟಿದ್ದಾರೆ.

ಬಿಜೆಪಿಯ ಟಿಕೇಟ್ ಆಕಾಂಕ್ಷಿಯಾಗಿರುವ ಅರುಣ್ ಕುಮಾರ್ ಪುತ್ತಿಲ ಅವರು ವಿಧಾನಸಭಾ ಚುನಾವಣೆಯಲ್ಲಿ ಸಣ್ಣ ಮತಗಳ ಅಂತರದಿಂದ ಪರಾಭವ ಹೊಂದಿದರೂ, ರಾಜ್ಯ ರಾಜಕಾರಣವೇ ಹಿಂದಿರುಗಿ ನೋಡುವಂತೆ ಮಾಡಿದ್ದರು. ಇದೀಗ ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಮತ್ತೊಮ್ಮೆ ಪುತ್ತಿಲ ಸ್ಪರ್ಧೆಯ ವಿಚಾರ ಮುನ್ನೆಲೆಗೆ ಬಂದಿದೆ.
ಪತ್ರಿಕಾಗೋಷ್ಠಿಯಲ್ಲಿ ಪುತ್ತಿಲ ಪರಿವಾರದ ಪ್ರಸನ್ನ ಮಾರ್ತಾ, ಶ್ರೀಕೃಷ್ಣ ಉಪಾಧ್ಯಾಯ, ಉಮೇಶ್ ಗೌಡ ಕೋಡಿಬೈಲು, ಅನಿಲ್ ತೆಂಕಿಲ, ಮಹೇಂದ್ರ ವರ್ಮಾ ಮಾತನಾಡಿ, ಜಿಲ್ಲೆಯಲ್ಲಿ ನಡೆಯುವ ಎಲ್ಲಾ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಸ್ಪರ್ಧಿಸಲಿದೆ ಎಂದು ತಿಳಿಸಿದರು.
ಈ ಮೂಲಕ ಲೋಕಸಭಾ ಚುನಾವಣೆಯಲ್ಲಿ ಅರುಣ್ ಕುಮಾರ್ ಪುತ್ತಿಲ ಅವರು ಸ್ಪರ್ಧಿಸುತ್ತಾರೆ ಎಂದು ಸ್ಪಷ್ಟಪಡಿಸಿದ್ದಾರೆ.


Click below to Share News

Related Articles

Leave a Reply

Your email address will not be published. Required fields are marked *

Back to top button
error: Content is protected !!