ತಾಲೂಕು ಸುದ್ದಿ

ಮಂಗಳೂರು : ನಿರ್ಮಾಣ ಹಂತದ ‘ಭಂಡಾರಮನೆ ಧ್ವಂಸ’ ಪ್ರಕರಣ: ಮೂವರು ಆರೋಪಿಗಳ ಬಂಧನ.!

Click below to Share News

ಮಂಗಳೂರು: ಜಿಲ್ಲೆಯ ತುಳುನಾಡಿನ ಪುರಾಣ ಪ್ರಸಿದ್ಧ ಕೊಂಡಾಣ ಕ್ಷೇತ್ರದ ಪಿಲಿಚಾಮುಂಡಿ ದೈವಸ್ಥಾನದ ನಿರ್ಮಾಣ ಹಂತದ ಕಟ್ಟಡವನ್ನು ರಾತ್ರೋರಾತ್ರಿ ಜೆಸಿಬಿ ಮೂಲಕ ಕಿಡಿಗೇಡಿಗಳು ಧ್ವಂಸ ಮಾಡಿದ್ದರು. ಈ ಘಟನೆ ಸಂಬಂಧ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.


ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ತುಳುನಾಡಿನ ಪುರಾಣ ಪ್ರಸಿದ್ಧ ಕ್ಷೇತ್ರಗಳಲ್ಲಿ ಒಂದು ಕೊಂಡಾಣ ಪಿಲಿಚಾಮುಂಡಿ ದೇವಸ್ಥಾನ.
ಈ ದೇವಸ್ಥಾನವನ್ನು ಬಣ ಸಂಘರ್ಷದ ಕಾರಣದಿಂದಾಗಿ ರಾತ್ರೋ ರಾತ್ರಿ ಜೆಸಿಬಿ ಬಳಸಿ ಕೆಡವಲಾಗಿತ್ತು.

ಈ ನಿರ್ಮಾಣ ಹಂತದ ದೇವಸ್ಥಾನವನ್ನು ಕೆಡವಿದ ಸಂಬಂಧ ಕೋಟೆಕಾರು ಪಟ್ಟಣ ಪಂಚಾಯ್ತಿಯ ಮುಖ್ಯಾಧಿಕಾರಿ ಆನಂದ್ ಎಂಬುವರು ಆರೋಪಿಗಳನ್ನು ಬಂಧಿಸುವಂತೆ ಪೊಲೀಸರಿಗೆ ದೂರು ನೀಡಿದ್ದರು. ಈ ದೂರಿನ ಹಿನ್ನಲೆಯಲ್ಲಿ ಇಂದು ಉಳ್ಳಾಳ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಮುತ್ತಣ್ಣ ಶೆಟ್ಟಿ, ಧೀರಜ್ ಹಾಗೂ ಶಿವರಾಜ್ ಎಂಬುದಾಗಿ ಗುರುತಿಸಲಾಗಿದೆ. ಇದೀಗ ಅವರನ್ನು ಬಂಧಿಸಿ, ಘಟನೆ ಸಂಬಂಧ ವಿಚಾರಣೆ ನಡೆಸುತ್ತಿದ್ದಾರೆ.


Click below to Share News

Related Articles

Leave a Reply

Your email address will not be published. Required fields are marked *

Back to top button
error: Content is protected !!