ತಾಲೂಕು ಸುದ್ದಿ
NIA ದಾಳಿ ಪ್ರಕರಣ:ಪುತ್ತೂರಿನಲ್ಲಿ ನಾಲ್ವರನ್ನು ವಶಕ್ಕೆ ಪಡೆದ NAI ಅಧಿಕಾರಿಗಳು
ಪುತ್ತೂರು: ದಕ್ಷಿಣಕನ್ನಡ ಜಿಲ್ಲೆಯ 16 ಕಡೆಗಳಲ್ಲಿ ಇಂದು ಬೆಳ್ಳಂಬೆಳಗ್ಗೆ ಎನ್ ಐಎ ಅಧಿಕಾರಿಗಳು ದಾಳಿ ಮಾಡಿದ್ದು, ಪುತ್ತೂರಿನಲ್ಲಿ ನಾಲ್ವರನ್ನು ಎನ್ ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.
ಮಹಮ್ಮದ್ ಹ್ಯಾರೀಸ್ ಕುಂಬ್ರ (32), ಸಜ್ಜದ್ ಹುಸೈನ್ ಕೋಡಿಂಬಾಡಿ (37), ಫೈಜಲ್ ಅಹಮ್ಮದ್ ತಾರಿಗುಡ್ಡೆ, ಸಂಶುದ್ದೀನ್ ಕೂರ್ನಡ್ಕ ಎಂಬವರನ್ನು ವಶಕ್ಕೆ ಪಡೆಯಲಾಗಿದ್ದು, ಇವರಿಗೆ ಪಿಎಫ್ಐ ಲಿಂಕ್ ಸಾಧ್ಯತೆ ಇದೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.