ತಾಲೂಕು ಸುದ್ದಿ

ಹಿಂದೂ ಕಾರ್ಯಕರ್ತರಿಗೆ ಪೊಲೀಸ್ ದೌರ್ಜನ್ಯ: ಗಂಭೀರ ಗಾಯಗೊಂಡವನ ಹರಿದ ಕಿವಿಯ ತಮಟೆ – ವೈದ್ಯಕೀಯ ವರದಿ ಹೊರಬೀಳುತ್ತಿದ್ದಂತೆ ಎಸ್ಪಿ ಯನ್ನು ಭೇಟಿಯಾದ ಪುತ್ತಿಲ.

Click below to Share News

ಪುತ್ತೂರು : ಬ್ಯಾನರ್ ಹಾಕಿದ ಆರೋಪಿಗಳ ವಿಚಾರಣೆಯ ನೆಪದಲ್ಲಿ ನಡೆದ ಪೊಲೀಸ್ ದೌರ್ಜನ್ಯದ ಸಂದರ್ಭ ಸಂತ್ರಸ್ತ ಯುವಕನ ಕಿವಿಯ ತಮಟೆಗೆ ತೀವ್ರ ಹಾನಿಯಾಗಿದೆ ಎಂಬ ವೈದಕೀಯ ವರದಿಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವರದಿಗಳು ವೈರಲ್ ಆಗುತ್ತಿದ್ದಂತೆ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ರವರು ದ.ಕ ಜಿಲ್ಲಾ ಎಸ್ಪಿಯವರನ್ನು ಭೇಟಿಯಾಗಿದ್ದಾರೆ.

ಬಿಜೆಪಿ ರಾಜ್ಯ ಅಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಹಾಗೂ ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡರಿಗೆ ಚಪ್ಪಲಿ ಹಾರ ಹಾಕಿ ಶ್ರದ್ಧಾಂಜಲಿ ಬ್ಯಾನರ್ ಹಾಕಿದ್ದಾರೆ ಎಂದು ಒಟ್ಟು 11 ಜನರನ್ನು ಬಂಧಿಸಿ ಪೊಲೀಸರು ದೌರ್ಜನ್ಯ ನಡೆಸಿದರು ಎಂದು ವ್ಯಾಪಕ ಪ್ರಚಾರ ಪಡೆದುಕೊಂಡ ಪ್ರಕರಣ ಮತ್ತಷ್ಟು ತೀವ್ರ ಸ್ವರೂಪ ಪಡೆಯುವ ಲಕ್ಷಣ ಕಾಣುತ್ತಿದೆ.

ಡಿವೈಎಸ್ಪಿ ಗೆ ಒತ್ತಡ ಹಾಕಿಸಿ ಬಿಜೆಪಿಯ ಕಾರ್ಯಕರ್ತರ ಮೇಲೆಯೇ ಡಿವೈಎಸ್ಪಿ ಕಚೇರಿಯಲ್ಲೇ ತೀವ್ರ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿತು.

ಮೇ.15ರ ಮಧ್ಯರಾತ್ರಿ ಅರುಣ್ ಪುತ್ತಿಲ ಡಿವೈಎಸ್ಪಿ ಕಚೇರಿಗೆ ಹೋಗಿ ಹಲ್ಲೆಗೊಳಗಾದವರ ಮುಚ್ಚಲಿಕೆ ಬರೆದು ಬಿಡುಗಡೆಗೊಳಿಸಿಕೊಂಡು ಬಂದಿದ್ದರು. ನಂತರ ಹಲ್ಲೆಗೊಳಗಾದವರ ಆರೋಗ್ಯದಲ್ಲಿ ಏರುಪೇರಾದ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಘಟನೆ ರಾಜ್ಯ ಮಟ್ಟದಲ್ಲಿ ಸದ್ದು ಮಾಡುತ್ತಿದ್ದಂತೆ ಪುತ್ತೂರಿನ ಡಿವೈಎಸ್ಪಿ, ಸಂಪ್ಯ ಎಸ್‌ಐ, ಪುತ್ತೂರಿನ ಪೊಲೀಸ್ ಕಾನ್ನೈಬಲ್ ರ ಮೇಲೆ ಪ್ರಕರಣ ದಾಖಲು ನಡೆಸಿ, ಎಸ್ಬಿಐ ಮತ್ತು ಪಿಸಿಯನ್ನು ಅಮಾನತು ಮಾಡಿ, ಡಿವೈಎಸ್ಪಿಯನ್ನು ರಜೆಯಲ್ಲಿ ಕಳುಹಿಸಲಾಗಿದೆ.

ತೀವ್ರ ಗಾಯಗೊಂಡ ಅವಿನಾಶ್ ರ ಕಿವಿ ನೋವು ಕಡಿಮೆಯಾಗದ ಕಾರಣ ಕಿವಿಯ ಸ್ಕ್ಯಾನಿಂಗ್ ಮಾಡಿದಾಗ ತಮಟೆ ಹರಿದ ಬಗ್ಗೆ ವೈದ್ಯಕೀಯ ವರದಿಯಲ್ಲಿ ಹೊರ ಬಂದಿದೆ. ಕೂಡಲೇ ದಕ್ಷಿಣ ಕನ್ನಡ ಎಸ್ಪಿ ವಿಕ್ರಂ ಅಮಾಟೆಯನ್ನು ಭೇಟಿಯಾದ ಅರುಣ್ ಕುಮಾರ್ ಪುತ್ತಿಲ ಎರಡು ದಿನದಲ್ಲಿ ಡಿವೈಎಸ್ಪಿಯನ್ನು ಅಮಾನತು ಮಾಡಬೇಕು ಮತ್ತು ಸಂತ್ರಸ್ತರಿಗೆ 5 ಲಕ್ಷದಂತೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು. ಕ್ರಮ ಆಗದಿದ್ದರೆ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.


Click below to Share News

Related Articles

Leave a Reply

Your email address will not be published. Required fields are marked *

Back to top button
error: Content is protected !!