ಪುತ್ತೂರು: ಆ.31ರಂದು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿಯವರ 169ನೇ ಜನ್ಮ ದಿನಾಚರಣೆ.
ಪುತ್ತೂರು: ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ (ರಿ.) ಪುತ್ತೂರು ಮತ್ತು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಮಂದಿರ ಇದರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿಯವರ 169ನೇ ಜನ್ಮ ದಿನಾಚರಣೆಯು ಆ.31ರಂದು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಮಂದಿರದಲ್ಲಿ ಜರಗಲಿದೆ.
ಮೂಲ್ಕಿ ವಿಜಯಾ ಕಾಲೇಜಿನ ನಿವೃತ್ತ ಪ್ರಾಂಶುಪಾಲರು
ಹಾಗೂ ರಸಾಯನ ಶಾಸ್ತ್ರ ಪ್ರಾಧ್ಯಾಪಕರಾದ ಡಾ. ಕೆ.ನಾರಾಯಣ ಪೂಜಾರಿಯವರು ಗುರು ಸಂದೇಶ ನೀಡಲಿದ್ದಾರೆ. ಪುತ್ತೂರು ಬಿಲ್ಲವ ಸಂಘದ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಲಯನ್ಸ್ ಜಿಲ್ಲೆ 317ಡಿ ಇದರ ಪೂರ್ವ ಗವರ ಡಾ.ಗೀತಪ್ರಕಾಶ್ ವಿಟ್ಲ, ಮಂಗಳೂರು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ರಾಜೇಶ್ ಬಿ, ಬೆಂಗಳೂರಿನ ಆನನ್ಯ ಎಂಟರ್ಪ್ರೈಸಸ್ನ ನಟೇಶ್ ಪೂಜಾರಿ ಪುಳಿತ್ತಡಿ ಭಾಗವಹಿಸಲಿದ್ದಾರೆ.
ವಿವಿಧ ಧಾರ್ಮಿಕ,ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿಯವರ 169ನೇ ಜನ್ಮ ದಿನಾಚರಣೆಯು ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.