ಪುತ್ತೂರು : ಆರ್ಯಾಪು, ನಿಡ್ಪಳ್ಳಿ ಗ್ರಾ.ಪಂ. ಉಪಚುನಾವಣೆ : ನಾಳೆ ಫಲಿತಾಂಶ ಪ್ರಕಟ
![](https://veekshakanews.com/wp-content/uploads/2023/07/WhatsApp-Image-2023-07-22-at-1_31_18-PM-750x375-transformed-3.jpeg)
ಪುತ್ತೂರು : ಆರ್ಯಾಪು ಹಾಗೂ ನಿಡ್ಪಳ್ಳಿ ಗ್ರಾಮ ಪಂಚಾಯತ್ನಲ್ಲಿ ಇಬ್ಬರು ಸದಸ್ಯರ ನಿಧನದಿಂದಾಗಿ ತೆರವಾಗಿರುವ ಎರಡು ಸ್ಥಾನಗಳಿಗೆ ಜು.23 ಉಪಚುನಾವಣೆ ನಡೆದಿದ್ದು, ಜು 26 (ನಾಳೆ ) ಫಲಿತಾಂಶ ಪ್ರಕಟವಾಗಲಿದೆ.
ಪುತ್ತೂರು ತಾಲೂಕು ಕಚೇರಿಯಲ್ಲಿ ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಪ್ರಾರಂಭವಾಗಲಿದೆ.
![](https://veekshakanews.com/wp-content/uploads/2023/07/WhatsApp-Image-2023-07-22-at-1_31_18-PM-750x375-transformed-2.jpeg)
ನಿಡ್ಪಳ್ಳಿ ಗ್ರಾಮ ಪಂಚಾಯತ್ ನಿಂದ ಪುತ್ತಿಲ ಪರಿವಾರ ಬೆಂಬಲಿತ ಅಭ್ಯರ್ಥಿಯಾಗಿ ಜಗನ್ನಾಥ್ ರೈ ಕೊಳೆಂಬೆತ್ತಿಮಾರು, ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಚಂದ್ರಶೇಖರ ಪ್ರಭು ಹಾಗೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾಗಿ ಸತೀಶ್ ಶೆಟ್ಟಿ.
ಆರ್ಯಾಪು ಗ್ರಾಮ ಪಂಚಾಯತ್ ನಿಂದ ಪುತ್ತಿಲ ಪರಿವಾರ ಬೆಂಬಲಿತ ಅಭ್ಯರ್ಥಿಯಾಗಿ ಸುಬ್ರಹ್ಮಣ್ಯ ಬಲ್ಯಾಯ ದೊಡ್ಡಡ್ಕ, ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಾಗಿ ಜಗದೀಶ್ ಭಂಡಾರಿ, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಜಿ.ಪುರುಷೋತ್ತಮ ಪ್ರಭು ಅಂತಿಮ ಕಾಣದಲ್ಲಿದರು.
ಬಿಜೆಪಿ ಮತ್ತು ಕಾಂಗ್ರೆಸ್ ಪ್ರಬಲವಾಗಿರು ಕ್ಷೇತ್ರದಲ್ಲಿ ಈ ಬಾರಿ ಪುತ್ತಿಲ ಪರಿವಾರದ ಬೆಂಬಲಿತ ಅಭ್ಯರ್ಥಿಗಳನ್ನು ಕಾಣಕ್ಕಿಳಿದ್ದಿದ್ದರು,ಆದ್ದರಿಂದ ಒಟ್ಟಾರೆಯಾಗಿ ಇಡೀ ಜಿಲ್ಲೆಯ ಚಿತ್ತ ನಾಳೆಯ ಫಲಿತಾಂಶದತ್ತ ನೋಡುವಂತಾಗಿದೆ.