ತಾಲೂಕು ಸುದ್ದಿ

ಪುತ್ತೂರು : ಹಿಂಸಾತ್ಮಕವಾಗಿ ಗೋ ಸಾಗಿಸುತ್ತಿದ್ದ ಶಿಫ್ಟ್ ಕಾರಿನ ಮೇಲೆ ಬಜರಂಗದಳ ಕಾರ್ಯಕರ್ತರಿಂದ ದಾಳಿ.

Click below to Share News

ಪುತ್ತೂರು: ಹಿಂಸಾತ್ಮಕವಾಗಿ ದನ ಸಾಗಾಟ  ಮಾಡುತ್ತಿದ್ದ  ಶಿಫ್ಟ್ ಕಾರು ಜಖಂಗೊಂಡ ಸ್ಥಿತಿಯಲ್ಲಿ ಕಬಕದಿಂದ ಪದ್ಮಡ್ಕ ಕಲ್ಲಂಡ್ಕ ಸಂಪರ್ಕ ರಸ್ತೆಯಲ್ಲಿ ಭಾನುವಾರ ರಾತ್ರಿ ಪತ್ತೆಯಾಗಿದೆ.

ಅಕ್ರಮ ಗೋ ಸಾಗಾಟಗಾರರು 4 ಗೋವುಗಳನ್ನು ಸಾಗಿಸುತ್ತಿದ್ದ ವೇಳೆ ಬಜರಂಗದಳ ಕಬಕದ ಕಾರ್ಯಕರ್ತರು ಕಾರನ್ನು ತಡೆಯಲು ಪ್ರಯತ್ನಿಸಿದಾಗ ಕಾರಿನ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿದ್ದು ಜಖಂ ಗೊಂಡಿದೆ.

ಈ ವೇಳೆ ಕಾರು ಚಾಲಕ ಹಾಗೂ ಕಾರಿನಲ್ಲಿದ್ದವರು ಕಾರು ಹಾಗೂ ಗೋವುಗಳನ್ನು ಬಿಟ್ಟು ಪರಾರಿಯಾಗಿರುವುದಾಗಿ ಮೂಲಗಳಿಂದ ತಿಳಿದು ಬಂದಿದೆ.

ಕಾರಿನಲ್ಲಿ ಎರಡು ದನ ಹಾಗೂ ಎರಡು ಕರು ಪತ್ತೆಯಾಗಿದೆ . ಅದರ ಕೈ ಕಾಲುಗಳನ್ನು ಹಿಂಸಾತ್ಮಕ ರಿತಿಯಲ್ಲಿ ಕಟ್ಟಲಾಗಿತ್ತು. ಹಿಂಸಾತ್ಮಕವಾಗಿ ಗೋವುಗಳನ್ನು ಸಾಗಿಸುತ್ತಿರುವ ಖಚಿತ ಮಾಹಿತಿ ಪಡೆದ ಬಜರಂಗದಳ ಕಬಕದ ಕಾರ್ಯಕರ್ತರು ಕಾರನ್ನು ನಿಲ್ಲಿಸಲು ಸೂಚಿಸಿದ್ದು, ಈ ವೇಳೆ ಜನರ ಕಣ್ಣಿಗೆ ಮಣ್ಣೆರೆಚಿ ಕಾರು ಚಾಲಕ ಪರಾರಿಯಾಗಲು ಯತ್ನಿಸಿದ್ದು ಇದರಿಂದ ಚಾಲಕ ತನ್ನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದು ಕಾರು ಸಂಪೂರ್ಣ ಜಕಂ ಆಗಿರುತ್ತದೆ. ನಂತರ ಸ್ಥಳಕ್ಕೆ ಆಗಮಿಸಿದ ಪುತ್ತೂರು ನಗರ ಠಾಣಾ  ಪೊಲೀಸ್ ಅಧಿಕಾರಿಗಳು ಬಜರಂಗದಳದ ಕಾರ್ಯಕರ್ತರ ಸಹಕಾರದಿಂದ 4 ಗೋವುಗಳನ್ನು ಮತ್ತು ಜಕಂಗೊಂಡ ವಾಹನವನ್ನು ಪುತ್ತೂರು ನಗರ ಪೊಲೀಸರು ಠಾಣೆಗೆ ತರಲಾಯಿತು. ರಕ್ಷಿಸಿದ ಗೋವುಗಳಿಗೆ ನೀರು ಮತ್ತು ಮೇವಿನ ವ್ಯವಸ್ತೆಯನ್ನು ಬಜರಂಗದಳದ ಕಾರ್ಯಕರ್ತರ ವ್ಯವಸ್ಥೆ ಮಾಡಿರುತ್ತಾರೆ.


ಚುನಾವಣಾ ನೀತಿ ಸಂಹಿತೆ ಜಾರಿ ಇರುವಾಗ ನಕಲಿ ನಂಬರ್ ಪ್ಲೇಟ್ ಬಳಸಿ ಅಕ್ರಮ ಮತ್ತು ಹಿಂಸಾತ್ಮಕ ಸಾಗಾಟಕ್ಕೆ ಸಾರ್ವಜನಿಕರು ತಿರ್ವ ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ.


Click below to Share News

Related Articles

Leave a Reply

Your email address will not be published. Required fields are marked *

Back to top button
error: Content is protected !!