ತಾಲೂಕು ಸುದ್ದಿ

ಪುತ್ತೂರು: ಕುರಿಯ ಜಾಗದ ತಕರಾರು ಅಕ್ರಮ ಪ್ರವೇಶ ಮನೆ ಧ್ವಂಸ ಲಕ್ಷಾಂತರ ರೂ. ನಷ್ಟ ದೂರು ದಾಖಲು.!

Click below to Share News

ಪುತ್ತೂರು :ಸಂಬಂಧಿಸಿದ ಯಾರೂ ಇಲ್ಲದ ಸಮಯ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಜೆಸಿಬಿಯಿಂದ ಹೆಂಚಿನ ಮಾಡಿನ ಮನೆಯೊಂದನ್ನು ಕೆಡವಿ ನಷ್ಟ ಉಂಟು ಮಾಡಿದ ಘಟನೆ ಮಾ.9ರ ಮಧ್ಯಾಹ್ನ ಕುರಿಯದಲ್ಲಿ ನಡೆದಿರುವುದಾಗಿ ವರದಿಯಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಮಾಹಿತಿ ಪಡೆದುಕೊಂಡಿದ್ದಾರೆ.

ಪುತ್ತೂರು ಆದರ್ಶ ಆಸ್ಪತ್ರೆ ಬಳಿಯಿರುವ ಹೊಟೇಲ್ ಶ್ರೀಲಕ್ಷ್ಮೀ ಇದರ ಮಾಲಕ, ಕುರಿಯ ಹೊಸಮಾರು ನಿವಾಸಿ ವಸಂತ ಪೂಜಾರಿ ಎಂಬವರು ಘಟನೆ ಕುರಿತು ಸಂಪ್ಯ ಪೊಲೀಸರಿಗೆ ದೂರು ನೀಡಿ. ನಮ್ಮ ಸ್ವಾಧೀನದಲ್ಲಿರುವ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಮನೆಯೊಳಗೆ ಜೆಸಿಬಿ ನುಗ್ಗಿಸಿ ಮನೆಯನ್ನು ಕೆಡವಿ ಮನೆಯ ವಸ್ತುಗಳನ್ನೆಲ್ಲಾ ನಾಶ ಮಾಡಿದ್ದಾರೆ’ ಎಂದು ಆರೋಪಿಸಿದ್ದಾರೆ.ಶಶಿಕಲಾ ರೈ,ಮತ್ತವರ ಮಗ ಉಜ್ವಲ್ ರೈ ಹಾಗೂ ಜೆಸಿಬಿ ಆಪರೇಟರ್ ವಿರುದ್ಧ ಅವರು ದೂರು ನೀಡಿದ್ದಾರೆ.ಪೊಲೀಸರು ಕಲಂ 447,448,427,34 ಐಪಿಸಿಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.


Click below to Share News

Related Articles

Leave a Reply

Your email address will not be published. Required fields are marked *

Back to top button
error: Content is protected !!