ತಾಲೂಕು ಸುದ್ದಿ
ಪುತ್ತೂರು : ಡಿವೈಎಸ್ಪಿ ಡಾ.ಗಾನಾ ಪಿ.ಕುಮಾರ್ ವರ್ಗಾವಣೆ.
ಪುತ್ತೂರು: ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಗಾನಾ ಪಿ.ಕುಮಾರ್ ಅವರನ್ನು ಲೋಕಾಯುಕ್ತಕ್ಕೆ ವರ್ಗಾವಣೆಗೊಳಿಸಿ ಸರಕಾರ ಆದೇಶಿಸಿದೆ.
ಈ ಹಿಂದೆ ಎರಡು ವರ್ಷಗಳ ಕಾಲ ಡಿವೈಎಸ್ಪಿಯಾಗಿ ಕರ್ತವ್ಯ ನಿರ್ವಹಿಸಿದ್ದ ಡಾ.ಗಾನಾ ಪಿ.ಕುಮಾರ್ ಅವರನ್ನು ಸರಕಾರ ಸಿಐಡಿಗೆ ವರ್ಗಾವಣೆಗೊಳಿಸಿತ್ತು.ಬಳಿಕ ಅವರ ವರ್ಗಾವಣೆಗೊಳಿಸಿ ಎಸ್ಪಿ ಕಚೇರಿಯ ಡಿಸಿಆರ್ಬಿ ಡಿವೈಎಸ್ಪಿಯಾಗಿ ನಿಯೋಜಿಸಲಾಗಿತ್ತು.
ನೂತನ ಡಿವೈಎಸ್ಪಿ ಆಗಿ ಅರುಣ್ ನಾಗೇಗೌಡ ನೇಮಕವಾಗಿದ್ದಾರೆ.
ರಾಜ್ಯಗುಪ್ತ ವಾರ್ತೆಗೆ ವರ್ಗಾವಣೆ ಆದೇಶದಲ್ಲಿರುವ ಅರುಣ್ ನಾಗೇಗೌಡ ರವರು ಪುತ್ತೂರಿಗೆ ವರ್ಗಾವಣೆಗೊಂಡಿದ್ದಾರೆ.