ತಾಲೂಕು ಸುದ್ದಿ

ಪುತ್ತೂರು : ಇಂದು ಶಾಸಕರ ನೂತನ ಕಛೇರಿ ಲೋಕಾರ್ಪಣೆ.

Click below to Share News

ಪುತ್ತೂರು : ಶಾಸಕರಾದ ಅಶೋಕ್ ಕುಮಾರ್ ರೈಯವರ ನೂತನ ಕಛೇರಿ ಆ.28ರಂದು ಉದ್ಘಾಟನೆಗೊಳ್ಳಲಿದೆ. ಶಾಸಕರ ಅಧಿಕೃತ ಕಛೇರಿ ಮಿನಿ ವಿಧಾನಸೌಧದ ಬಳಿ ಇರುವ ಹಳೆಯ ಪುರಸಭಾ ಕಛೇರಿ (ಪುಡಾಕಛೇರಿ)ಯಲ್ಲಿ ಉದ್ಘಾಟನೆ ಗೊಳ್ಳಲಿದ್ದು ಹಲವಾರು ಮಂದಿ ಗಣ್ಯರು ಭಾಗವಹಿಸಲಿದ್ದಾರೆ.

ವಿಶಾಲ ಸ್ಥಳಾವಕಾಶವನ್ನು ಹೊಂದಿರುವ ಕಛೇರಿಯಲ್ಲಿ ಶಾಸಕರನ್ನು ಭೇಟಿಯಾಗಲು ಬರುವವರಿಗೆ, ಅಥವಾ ಕಛೇರಿಗೆ ಬರುವ ಸಾರ್ವಜನಿಕರಿಗೆ ಎಲ್ಲಾ ಸೌಕರ್ಯಗಳ ನ್ನೊಳನ್ನು ಈ ಕಛೇರಿ ಹೊಂದಿದೆ. ಪಾರ್ಕಿಂಗ್ ವ್ಯವಸ್ಥೆ ಯೂ ಸಾಕಷ್ಟಿದೆ. ವಿಧಾನಸಭಾ ಅಧ್ಯಕ್ಷರಾದ ಯು ಟಿ ಖಾದರ್, ಮಾಜಿ ಸಚಿವ ಬಿ ರಮಾನಾಥ ರೈ, ಮಾಜಿ ಶಾ ಸಕಿ ಶಕುಂತಳಾ ಶೆಟ್ಟಿ ಸೇರಿದಂತೆ ಪ್ರಮುಖ ರಾಜಕೀಯ ಮುಖಂಡರು ಭಾಗವಹಿಸಲಿದ್ದಾರೆ. ಕಛೇರಿ ಉದ್ಘಾಟನೆ ಬಳಿಕ ಸುಮಾರು 160 ಕುಟುಂಬಗಳಿಗೆ ಶಾಸಕರು ಹಕ್ಕುಪತ್ರ ವಿತರಿಸಲಿದ್ದಾರೆ ಎಂದು ತಿಳಿದು ಬಂದಿದೆ.

ಸಾರ್ವಜನಿಕರಿಗೆ ತ್ವರಿತಗತಿಯ ಸೇವೆ ನೀಡುವುದು ಈ ಕಛೇರಿಯ ಉದ್ದೇಶವಾಗಿದ್ದು ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಾರ್ವಜನಿಕರು ಈ ಕಚೇರಿಗೆ ಬಂದರೆ ಶಾಸಕರನ್ನು ಭೇಟಿಯಾಗಬಹುದು. ಕಛೇರಿಯಲ್ಲಿ ಸಾರ್ವಜನಿಕರಿಗೆ ಎಲ್ಲಾ ರೀತಿಯ ಅರ್ಜಿಗಳನ್ನು ಸ್ವೀಕರಿಸಲು ಪ್ರತ್ಯೇಕ ಕೌಂಟರ್‌ಗಳನ್ನು ತೆರೆಯಲಾಗಿದೆ. ಯಾವುದೇ ಇಲಾಖೆಗಳಿಗೆ ಅರ್ಜಿ ಸಲ್ಲಿಸಲು ಅಥವಾ ಯಾವುದೆ ಇಲಾಖೆಯಲ್ಲಿ ಕೆಲಸ ಕಾರ್ಯಗಳು ನಡೆಯದೆ ಇದ್ದಲ್ಲಿ ಶಾಸಕರ ಕಚೇರಿಯಲ್ಲಿರುವ ಆಯಾ ಇಲಾಖೆಗೆ ಸಂಬಂಧಿಸಿದ ಸಿಬಂದಿಗಳನ್ನು ಭೇಟಿಯಾಗಿ ಮಾತನಾಡಬಹುದಾಗಿದೆ.

ನನ್ನ ವಿಧಾನಸಭಾ ಕ್ಷೇತ್ರದ ಸಾರ್ವಜನಿಕರಿಗೆ ಅನುಕೂಲವಾಗಲೆಂದು ಮಿನಿ ವಿಧಾನಸೌಧದ ಬಳಿಯೇ ಹೊಸ ಕಛೇರಿಯನ್ನು ತೆರೆದಿದ್ದು ಸಾರ್ವಜನಿಕರ ಸೇವೆಗೆ ಸಿಬಂದಿಗಳನ್ನು ನೇಮಕ ಮಾಡಿದ್ದೇನೆ. ಯಾವುದೇ ಸಮಸ್ಯೆಗಳಿದ್ದರೂ, ತೊಂದರೆಗೊಳಗಾದವರು ಶಾಸಕರ ಕಚೇರಿಗೆ ಬಂದು ತಿಳಿಸಬಹುದು. ದೂರು, ಮನವಿ ಇದ್ದರೂ ಕೊಡಬಹುದು. ಕ್ಷೇತ್ರದ ಎಲ್ಲರಿಗೂ ನನ್ನ ಕಛೇರಿಗೆ ಮುಕ್ತವಾಗಿ ಬರಲು ಅವಕಾಶ ಇದೆ ಎಂದು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.


Click below to Share News

Related Articles

Leave a Reply

Your email address will not be published. Required fields are marked *

Back to top button
error: Content is protected !!