ತಾಲೂಕು ಸುದ್ದಿ

ಪುತ್ತೂರು-ಮಾಣಿ ರಾ. ಹೆದ್ದಾರಿ ಚತುಷ್ಪಥ ರಸ್ತೆ ನಿರ್ಮಾಣ : ರಾ. ಹೆದ್ದಾರಿ ಅಧಿಕಾರಿಗಳಿಗೆ ಶಾಸಕ ಅಶೋಕ್ ಕುಮಾರ್ ರೈ ಮನವಿ

Click below to Share News

ಪುತ್ತೂರು; ಮಾಣಿ-ಮೈಸೂರು ರಾ. ಹೆದ್ದಾರಿಯ ಮಾಣಿಯಿಂದ ಪುತ್ತೂರು ತನಕ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಆಗ್ರಹಿಸಿ ಪುತ್ತೂರು ಶಾಸಕರಾದ ಅಶೋಕ್ ರೈಯವರು ರಾ. ಹೆದ್ದಾರಿ ವಿಭಾಗದ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿ ಅಧಿಕಾರಿಗಳ ಮೂಲ ಕೇಂದ್ರ ಸರಕಾರಕ್ಕೆ ಮನವಿಯನ್ನು ಸಲ್ಲಿಸಿದ್ದಾರೆ.

ಬೆಂಗಳೂರಿನಲ್ಲಿ ರಾಷ್ಟ್ರೀಯ ಹೆದ್ದಾರಿಯ ದಕ್ಷಿಣ ಭಾರತ ಪ್ರಾಂತೀಯ ಅಧಿಕಾರಿ ಮಹೇಂದ್ರ ಶರ್ಮ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಮಾಣಿಯಿಂದ ಪುತ್ತೂರು ತನಕ ಚತುಷ್ಪಥ ಕಾಮಗಾರಿ ಆರಂಭದಲ್ಲಿ ನಡೆಸುವಂತೆ ಮತ್ತು ಕಾಮಗಾರಿಯನ್ನು ಪ್ರಸಕ್ತ ಸಾಲಿನ ವಾರ್ಷಿಯ ಯೋಜನೆಯಲ್ಲಿ ಸೇರಿಸಿಕೊಳ್ಳುವಂತೆಯೂ ಮನವಿ ಮಾಡಿದ್ದಾರೆ. ಪ್ರಸಕ್ತ ಸಾಲಿನ ವಾರ್ಷಿಕ ಯೋಜನೆಯಲ್ಲಿ ಸೇರಿಸಿಕೊಂಡಲ್ಲಿ ಮಾತ್ರ ಮುಂದಿನ ಅವಧಿಗೆ ಈ ಕಾಮಗಾರಿಗೆ ಚಾಲನೆ ದೊರೆಯಬಹುದಾಗಿದ್ದು ಇಲ್ಲವಾದಲ್ಲಿ ಇನ್ನಷ್ಟು ದಿನ ಕಾಯಬೇಕಾದ ಅನಿವಾರ್ಯತೆ ಉಂಟಾಗಬಹುದು. ಈ ಕಾರಣಕ್ಕೆ ಪ್ರಸಕ್ತ ಸಾಲಿನಲ್ಲೇ ಈ ಬೇಡಿಕೆಯನ್ನು ಮಂಡಿಸುವಂತೆ ಪುತ್ತೂರಿನ ನೂತನ ಶಾಸಕ ಅಶೋಕ್ ಕುಮಾರ್ ರೈ ಅಧಿಕಾರಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. ಶಾಸಕರ ಮನವಿಯನ್ನು ಸ್ವೀಕರಿಸಿದ ಅಧಿಕಾರಿ ಮಹೇಂದ್ರ ಶರ್ಮ ಅವರು ತಮ್ಮ ಬೇಡಿಕೆಯನ್ನು ಕೇಂದ್ರ ಸಚಿವರಿಗೆ ಮನವರಿಕೆ ಮಾಡಿಕೊಡುವುದಾಗಿಯೂ, ಕಾಮಗಾರಿಯ ಬೇಡಿಕೆಯ ಬಗ್ಗೆ ವಿವರಣೆ ನೀಡುವುದಾಗಿಯೂ ಶಾಸಕರಲ್ಲಿ ತಿಳಿಸಿದ್ದಾರೆ.


Click below to Share News

Related Articles

Leave a Reply

Your email address will not be published. Required fields are marked *

Back to top button
error: Content is protected !!