ತಾಲೂಕು ಸುದ್ದಿ

ಪುತ್ತೂರು : ಪೊಲೀಸರಿಂದ ದೌರ್ಜನ್ಯ ಪುತ್ತೂರು ಗ್ರಾಮಾಂತರ ಪಿ.ಎಸ್.ಐ ಮತ್ತು ಪಿಸಿ ಅಮಾನತು

Click below to Share News

ಪುತ್ತೂರು : ಬ್ಯಾನರಿಗೆ ಚಪ್ಪಲಿ ಹಾರ ಹಾಕಿದ್ದ ಪ್ರಕರಣದಲ್ಲಿ ಪುತ್ತೂರು ನಗರ ಠಾಣೆಯಲ್ಲಿ ವಿಚಾರಣೆಗೆ ಒಳಪಡಿಸಿದ ಆರೋಪಿತರಿಗೆ ಪೊಲೀಸರು ಹಲ್ಲೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ .
ಪುತ್ತೂರು ಡಿಎಸ್ಪಿ , ಪುತ್ತೂರು ಗ್ರಾಮಾಂತರ ಠಾಣಾ ಪಿ.ಎಸ್.ಐ , ಪುತ್ತೂರು ಗ್ರಾಮಾಂತರ ಠಾಣಾ ಪಿಸಿ ಹರ್ಷಿತ್ ರವರ ವಿರುದ್ಧ ಪುತ್ತೂರು ನಗರ ಠಾಣೆ Cr no.39 / 23 u / s 323,324,506 r / w 34 ಐಪಿಸಿ ರಂತೆ ಪ್ರಕರಣ ದಾಖಲಾಗಿದೆ.


ಪ್ರಕರಣದ ತನಿಖೆಯನ್ನು ಬಂಟ್ವಾಳ ಡಿಎಸ್ಪಿ ರವರಿಗೆ ವಹಿಸಲಾಗಿದೆ . ಹೆಚ್ಚುವರಿ ಪೊಲೀಸ್ ಅಧೀಕ್ಷಕರ ವಿಚಾರಣೆ ವರದಿ ಆಧಾರದ ಮೇಲೆ ಪುತ್ತೂರು ಗ್ರಾಮಾಂತರ ಠಾಣಾ ಪಿ.ಎಸ್.ಐ , ಪುತ್ತೂರು ಗ್ರಾಮಾಂತರ ಠಾಣಾ ಪಿಸಿ ಹರ್ಷಿತ್ ರನ್ನು ಸೇವೆಯಿಂದ ಅಮಾನತು ಗೊಳಿಸಲಾಗಿದೆ ಹಾಗೂ ಪುತ್ತೂರು ಡಿಎಸ್ಪಿ ರವರ ವಿರುದ್ಧ ಸೂಕ್ತ ಇಲಾಖಾ ಶಿಸ್ತು ಕ್ರಮ ಕೈಗೊಳ್ಳಲು ವರದಿಯನ್ನು ಮೇಲಾಧಿಕಾರಿಗಳಿಗೆ ಸಲ್ಲಿಸಲಾಗಿದೆ .


Click below to Share News

Related Articles

Leave a Reply

Your email address will not be published. Required fields are marked *

Back to top button
error: Content is protected !!