ತಾಲೂಕು ಸುದ್ದಿ

ಪುತ್ತಿಲ ಪರಿವಾರ ಕಚೇರಿ ಮುಂಭಾಗ ಗಲಾಟೆ ಪ್ರಕರಣ : ಆರೋಪಿಗಳಿಗೆ ನ್ಯಾಯಾಂಗ ಬಂಧನ.

Click below to Share News

ಪುತ್ತೂರು: ಮುಕ್ರಂಪಾಡಿಯಲ್ಲಿರುವ ಪುತ್ತಿಲ ಪರಿವಾರದ
ಕಛೇರಿಯ ಮುಂಭಾಗದಲ್ಲಿ ತಲ್ವಾರ್‌ನೊಂದಿಗೆ ಕಾರಿನಲ್ಲಿ ಬಂದ ತಂಡ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ನ.10ರಂದು ಮಧ್ಯಾಹ್ನ ಈ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿ ಹಿಂದು ಜಾಗರಣ ವೇದಿಕೆಯ ಜಿಲ್ಲಾ ಸಹ ಸಂಯೋಜಕ ಶಾಂತಿಗೋಡು ಗ್ರಾಮದ ದಿನೇಶ್ ಪಂಜಿಗ(38ವ), ನರಿಮೊಗರು ಗ್ರಾಮದ ಭವಿತ್(19ವ), ಬೊಳುವಾರು ನಿವಾಸಿ ಮನ್ವಿತ್(18ವ), ಚಿಕ್ಕಮುನ್ನೂರು ಗ್ರಾಮದ ಜಯಪ್ರಕಾಶ್(18ವ), ಚಿಕ್ಕಮುನ್ನೂರು ಗ್ರಾಮದ ಚರಣ್(23ವ), ಬನ್ನೂರು ಗ್ರಾಮದ ಮನೀಶ್(23ವ), ಕಸಬ ಗ್ರಾಮದ ವಿನೀತ್(19ವ) ಸಹಿತ ಇಬ್ಬರು ಅಪ್ರಾಪ್ತ ಪ್ರಾಯದ ಬಾಲಕರನ್ನು ಪೊಲಿಸರು ವಶಕ್ಕೆ ಪಡೆದು ಕೊಂಡು ಪ್ರಕರಣ ದಾಖಲಿಸಿಕೊಂಡಿದ್ದರು. ನ.11ರಂದು ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದಾಗ ನ್ಯಾಯಾಧೀಶರು ಅರೋಪಿಗಳಿಗೆ ನ.15ರ ತನಕ ನ್ಯಾಯಾಂಗ ಕಸ್ಟಡಿಗೆ ನೀಡಿದ್ದಾರೆ.


Click below to Share News

Related Articles

Leave a Reply

Your email address will not be published. Required fields are marked *

Back to top button
error: Content is protected !!