ತಾಲೂಕು ಸುದ್ದಿ
ಸಾಜ : ಕಾಡ್ಲ ಶ್ರೀ ವಿಷ್ಣುಮೂರ್ತಿ ಒತ್ತೆಕೋಲಕ್ಕೆ ಕೊಲ್ಲಿ ಮುಹೂರ್ತ.
ಸಾಜ : ಕಾಡ್ಲ ವೈಕುಂಠಪುರ ಶ್ರೀ ವಿಷ್ಣುಮೂರ್ತಿ ಹಾಗೂ ಪರಿವಾರ ದೈವಗಳ ದೈವಸ್ಥಾನದಲ್ಲಿ ಫೆ.2 ಮತ್ತು 3ರಂದು ನಡೆಯಲಿರುವ ಶ್ರೀ ವಿಷ್ಣುಮೂರ್ತಿ ಒತ್ತೆಕೋಲ ಹಾಗೂ ಪರಿವಾರದ ದೈವಗಳ ನೇಮೋತ್ಸವ ನಡೆಯಲಿದ್ದು.
ಇದರ ಪೂರ್ವಭಾವಿಯಾಗಿ ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲಕ್ಕೆ ಕೊಲ್ಲಿ ಮುಹೂರ್ತವು ಕಾರ್ಯವು ನ.19ರಂದು ಕಾಡ್ಲ ವೈಕುಂಠಪುರ ಶ್ರೀ ವಿಷ್ಣುಮೂರ್ತಿ ಹಾಗೂ ಪರಿವಾರ ದೈವಗಳ ದೈವಸ್ಥಾನದ ಬಳಿ ನಡೆಯಿತು.
ಈ ಸಂದರ್ಭದಲ್ಲಿ ಸೇವಾ ಸಮಿತಿಯ ಪದಾಧಿಕಾರಿಗಳು ಸದಸ್ಯರು, ಹಾಗೂ ಊರ ಭಕ್ತಾದಿಗಳು ಭಾಗವಹಿಸಿದರು.