ತಾಲೂಕು ಸುದ್ದಿ
ಇಂದು(ಜು.23) : ಆರ್ಯಾಪು, ನಿಡ್ಪಳ್ಳಿ ಗ್ರಾ.ಪಂ. ಉಪಚುನಾವಣೆ
![](https://veekshakanews.com/wp-content/uploads/2023/07/WhatsApp-Image-2023-07-22-at-1_31_18-PM-750x375-transformed-1.jpeg)
ಪುತ್ತೂರು : ಆರ್ಯಾಪು ಹಾಗೂ ನಿಡ್ಪಳ್ಳಿ ಗ್ರಾಮ ಪಂಚಾಯತ್ನ ಇಬ್ಬರು ಸದಸ್ಯರ ನಿಧನದಿಂದಾಗಿ ತೆರವಾಗಿರುವ ಎರಡು ಸ್ಥಾನಗಳಿಗೆ ಇಂದು(ಜು.23) ಉಪಚುನಾವಣೆ ನಡೆಯಲಿದೆ.
ಆರ್ಯಾಪು ಹಾಗೂ ನಿಡ್ಪಳ್ಳಿ ಗ್ರಾ.ಪಂ.ನಲ್ಲಿ ತಲಾ 3 ಅಭ್ಯರ್ಥಿಗಳು ಕಣದಲ್ಲಿದ್ದಾರೆ.
![](https://veekshakanews.com/wp-content/uploads/2023/07/WhatsApp-Image-2023-07-22-at-1_31_18-PM-750x375-transformed.jpeg)
ನಿಡ್ಪಳ್ಳಿ ಗ್ರಾಮ ಪಂಚಾಯತ್ ನಿಂದ ಪುತ್ತಿಲ ಪರಿವಾರ ಬೆಂಬಲಿತ ಅಭ್ಯರ್ಥಿಯಾಗಿ ಜಗನ್ನಾಥ್ ರೈ ಕೊಳೆಂಬೆತ್ತಿಮಾರು, ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಚಂದ್ರಶೇಖರ ಪ್ರಭು ಹಾಗೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾಗಿ ಸತೀಶ್ ಶೆಟ್ಟಿ.
ಆರ್ಯಾಪು ಗ್ರಾಮ ಪಂಚಾಯತ್ ನಿಂದ ಪುತ್ತಿಲ ಪರಿವಾರ ಬೆಂಬಲಿತ ಅಭ್ಯರ್ಥಿಯಾಗಿ ಸುಬ್ರಹ್ಮಣ್ಯ ಬಲ್ಯಾಯ ದೊಡ್ಡಡ್ಕ, ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಾಗಿ ಜಗದೀಶ್ ಭಂಡಾರಿ, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಜಿ.ಪುರುಷೋತ್ತಮ ಪ್ರಭು ಅಂತಿಮ ಕಣದಲ್ಲಿದ್ದಾರೆ. ಈ ಅಭ್ಯರ್ಥಿಗಳ ಚುನಾವಣೆ ಭವಿಷ್ಯ ಇಂದು ಮತ ಪೆಟ್ಟಿಗೆ ಸೇರಿ, ಜು.26 ರಂದು ನಿರ್ಧಾರವಾಗಲಿದೆ.